ತಿಮರೋಡಿ ಪರ ಪ್ರತಿಭಟನೆಗೆ ಬೆಳ್ತಂಗಡಿ ಪೊಲೀಸರಿಂದ ಅನುಮತಿ ನಿರಾಕರಣೆ - Karavali Times ತಿಮರೋಡಿ ಪರ ಪ್ರತಿಭಟನೆಗೆ ಬೆಳ್ತಂಗಡಿ ಪೊಲೀಸರಿಂದ ಅನುಮತಿ ನಿರಾಕರಣೆ - Karavali Times

728x90

26 October 2025

ತಿಮರೋಡಿ ಪರ ಪ್ರತಿಭಟನೆಗೆ ಬೆಳ್ತಂಗಡಿ ಪೊಲೀಸರಿಂದ ಅನುಮತಿ ನಿರಾಕರಣೆ

ಬೆಳ್ತಂಗಡಿ, ಅಕ್ಟೋಬರ್ 26, 2025 (ಕರಾವಳಿ ಟೈಮ್ಸ್) : ಮಹೇಶ್ ಶೆಟ್ಟಿ ತಿಮರೋಡಿ ಪರ ಅ 27 ರಂದು ಬೆಳ್ತಂಗಡಿಯಲ್ಲಿ ಹಿಂದೂ ಜಾಗರಣ ವೇದಿಕೆ ಹಮ್ಮಿಕೊಂಡಿದ್ದ ಪ್ರತಿಭಟನೆಗೆ ಪೊಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. 

ಅ 27 ರಂದು ಮಹೇಶ್ ಶೆಟ್ಟಿ ತಿಮರೋಡಿ ಪರವಾಗಿ ಪ್ರತಿಭಟನೆ ನಡೆಸಲು ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಅಧ್ಯಕ್ಷ ಅನಿಲ್ ಕುಮಾರ್ ಅಂತರ ಅವರು ಅನುಮತಿ ಪೊಲೀಸ್ ಇಲಾಖೆಯ ಅನುಮತಿ ಕೇಳಿದ್ದರು. 

ಆದರೆ ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಉಚ್ಚ ನ್ಯಾಯಾಲಯದಲ್ಲಿ (ರಿಟ್ ಪಿಟಿಷನ್ ಸಂಖ್ಯೆ : 30021/2025) ವಿಚಾರಣೆಯಲ್ಲಿರುವುದರಿಂದ, ಪ್ರತಿಭಟನೆಗೆ ಪೆÇಲೀಸ್ ಇಲಾಖೆ ಅನುಮತಿ ನಿರಾಕರಿಸಿದೆ. ಇಲಾಖಾ ಸೂಚನೆ ಉಲ್ಲಂಘಿಸಿದರೆ, ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಇಲಾಖೆ ಎಚ್ಚರಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ತಿಮರೋಡಿ ಪರ ಪ್ರತಿಭಟನೆಗೆ ಬೆಳ್ತಂಗಡಿ ಪೊಲೀಸರಿಂದ ಅನುಮತಿ ನಿರಾಕರಣೆ Rating: 5 Reviewed By: karavali Times
Scroll to Top