ಬಂಟ್ವಾಳ, ನವೆಂಬರ್ 03, 2025 (ಕರಾವಳಿ ಟೈಮ್ಸ್) : ಹೆದ್ದಾರಿ ಬದಿ ನಡೆದುಕೊಂಡು ಹೋಗುತ್ತಿದ್ದ ವೃದ್ದರೋರ್ವರಿಗೆ ಸ್ಕೂಟರ್ ಡಿಕ್ಕಿಯಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಪುದು ಗ್ರಾಮದ ಮಾರಿಪಳ್ಳ ಸಮೀಪದ ಹತ್ತನೇ ಮೈಲಿಕಲ್ಲು ಎಂಬಲ್ಲಿ ನ 1 ರಂದು ಸಂಭವಿಸಿದೆ.
ಗಾಯಾಳು ವೃದ್ದರನ್ನು ಸ್ಥಳೀಯ ನಿವಾಸಿ ಸಯ್ಯದ್ ಬಾವಾ (81) ಎಂದು ಹೆಸರಿಸಲಾಗಿದೆ. ಇವರು ನ 1 ರಂದು ಬೆಳಿಗ್ಗೆ 8.30ರ ವೇಳೆಗೆ 10ನೇ ಮೈಲಿಕಲ್ಲಿನಿಂದ ಮಾರಿಪಳ್ಳ ಕಡೆಗೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಬಿ ಸಿ ರೋಡು ಕಡೆಗೆ ಶಶಾಂಕ್ ಎಂಬವರು ಚಲಾಯಿಸಿಕೊಂಡು ಬಂದ ಸ್ಕೂಟರ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಸಯ್ಯಿದ್ ಬಾವಾ ಹಾಗೂ ಸ್ಕೂಟರ್ ಸವಾರ ಶಶಾಂಕ್ ಅವರಿಬ್ಬರೂ ರಸ್ತೆಗೆ ಬಿದ್ದಿದ್ದಾರೆ. ಸಯ್ಯದ್ ಬಾವಾ ಅವರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಅವರ ಪುತ್ರ ಮೊಹಮ್ಮದ್ ನಿಜಾಮುದ್ದೀನ್ (27) ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.












0 comments:
Post a Comment