ಬೆಂಗಳೂರು, ನವೆಂಬರ್ 01, 2025 (ಕರಾವಳಿ ಟೈಮ್ಸ್) : ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸುವ ಆದೇಶವನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಈ ಬಗ್ಗೆ ಆದೇಶ ಹೊರಡಿಸಿರುವ ಮುಖ್ಯಮಂತ್ರಿಗಳು, ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟ್ಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ ಮಾಡುವಂತೆ ಹಿಂದೆಯೇ ಸೂಚನೆಗಳನ್ನು ನೀಡಲಾಗಿತ್ತು. ಈ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಅಲ್ಲದೆ ಮುಖ್ಯಮಂತ್ರಿ ಮತ್ತು ಇಲಾಖಾ ಸಚಿವರುಗಳ ಸಭೆಗಳಲ್ಲಿ, ಸಚಿವಾಲಯವೂ ಸೇರಿದಂತೆ ರಾಜ್ಯದಾದ್ಯಂತ ನಡೆಯುವ ಎಲ್ಲಾ ಸರ್ಕಾರಿ ಸಭೆ-ಕಾರ್ಯಕ್ರಮಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಎಂಎಫ್ ಇದರ ‘ನಂದಿನಿ’ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆಯೂ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸಿಎಂ ಸೂಚಿಸಿದ್ದಾರೆ.















0 comments:
Post a Comment