ಮಂಗಳೂರು, ನವೆಂಬರ್ 27, 2025 (ಕರಾವಳಿ ಟೈಮ್ಸ್) : ಮಂಗಳೂರಿನ ಸಂತ ಅಲೋಶಿಯಸ್ ಕೈಗಾರಿಕಾ ತರಬೇತಿ ಸಂಸ್ಥೆ (ಐಟಿಐ) ಮತ್ತು ಯುವನಿಕಾ ಫೌಂಡೇಶನ್ ಸಹಯೋಗದಲ್ಲಿ ಸಂವಿಧಾನ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಅವರು, ಯುವ ಪೀಳಿಗೆ ಸಂವಿಧಾನದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ರಾಷ್ಟ್ರ ಇನ್ನಷ್ಟು ಬಲಿಷ್ಠವಾಗಲು ಸಾಧ್ಯ. ಸಂವಿಧಾನದ ಆಶಯಗಳು, ನಾಗರಿಕರ ಮೂಲಭೂತ ಕರ್ತವ್ಯಗಳು ಹಾಗೂ ಪ್ರಜಾಸತ್ತಾತ್ಮಕ ಬದುಕಿನ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಡಾ. ರಾಜಾರಾಮ ತೊಳ್ಪಾಡಿ ಅವರು, ಸಂವಿಧಾನದ ಸಮಾಜಮುಖಿ ತತ್ವಗಳು ಮತ್ತು ಭಾರತೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ನಾಗರಿಕರ ಜಾಗೃತ ಪಾತ್ರದ ಕುರಿತು ವಿಸ್ತೃತವಾಗಿ ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ಜಾನ್ ಡಿ’ಸೋಜಾ ಎಸ್ ಜೆ ಅವರು ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸಂವಿಧಾನ ಅರಿವು ಅಗತ್ಯವಿದೆ ಎಂದರು.
ಸಂತ ಅಲೋಶಿಯಸ್ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯ ರೋಷನ್ ಡಿಸೋಜಾ ಸ್ವಾಗತಿಸಿದರು. ಕಾರ್ಯಕ್ರಮ ಸಂಯೋಜಕ ರಘುವೀರ್ ಸೂಟರ್ ಪೇಟೆ ಅವರು ಸಂವಿಧಾನ ದಿನಾಚರಣೆಯ ಪ್ರಾಮುಖ್ಯತೆ ಹಾಗೂ ಸಾಂವಿಧಾನಿಕ ಮೌಲ್ಯಗಳನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಪ್ರೇರೇಪಿಸಿದರು.
ಸಂಸ್ಥೆಯ ನೋಯೆಲ್ ಲೋಬೊ, ವಿಲ್ಸನ್ ಮತ್ತು ಪದ್ಮಾವತಿ ಅವರು ಕಾರ್ಯಕ್ರಮದ ಸುಗಮ ನಿರ್ವಹಣೆಯಲ್ಲಿ ಸಹಕರಿಸಿದರು. ಶ್ರೇಯಸ್ ವಂದಿಸಿದರು.
ಈ ಸಂದರ್ಭ ಕೆ. ಕಸ್ತೂರಿ ನಿರ್ದೇಶಕರು ಮತ್ತು ಸಂತೋಷ್ ಯಾದವ್ ಯುªನಿಕಾ ಫೌಂಡೇಶನ್ ಹಾಗೂ ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಹಿತೇಶ್ ಬಂಗೇರ ಮೊದಲಾದವರು ಭಾಗವಹಿಸಿದ್ದರು.














0 comments:
Post a Comment