ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ದ.ಕ. ಜಿಲ್ಲೆಯಲ್ಲಿ ಪರಿಣಾಮಕಾರಿ ಜಾರಿ : ಭರತ್ ಮುಂಡೋಡಿ - Karavali Times ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ದ.ಕ. ಜಿಲ್ಲೆಯಲ್ಲಿ ಪರಿಣಾಮಕಾರಿ ಜಾರಿ : ಭರತ್ ಮುಂಡೋಡಿ - Karavali Times

728x90

20 November 2025

ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ದ.ಕ. ಜಿಲ್ಲೆಯಲ್ಲಿ ಪರಿಣಾಮಕಾರಿ ಜಾರಿ : ಭರತ್ ಮುಂಡೋಡಿ

ಸುಳ್ಯ, ನವೆಂಬರ್ 20, 2025 (ಕರಾವಳಿ ಟೈಮ್ಸ್) : ರಾಜ್ಯ ಸರಕಾರದ 5 ಗ್ಯಾರಂಟಿ ಯೋಜನೆಗಳು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಜಾರಿಯಾಗಿದ್ದು, ಶೇಕಡಾ 95 ರಷ್ಟು ಮಂದಿ ಫಲಾನುಭವಿಗಳಾಗಿದ್ದಾರೆ ಎಂದು  ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ ತಿಳಿಸಿದ್ದಾರೆ.

ಸುಳ್ಯ-ಗಾಂಧಿನಗರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ಯಾರಂಟಿ ಯೋಜನೆಗಳ ಅರಿವು ಮತ್ತು ಜಾಗೃತಿ ಮೂಡಿಸುವ ದ.ಕ ಜಿಲ್ಲಾ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಗೆ ನೋಂದಣಿ ಕಾರ್ಯಕ್ರಮವು ಜಿಲ್ಲೆಯಲ್ಲಿ ಯೋಜನೆಯ ಆರಂಭದಲ್ಲಿಯೇ ಯಶಸ್ವಿಯಾಗಿ ನಡೆದಿದೆ. ಇದಲ್ಲದೆ ಎಲ್ಲಾ ಕಡೆ ಸಾರ್ವಜನಿಕರಿಗೆ ಗ್ಯಾರಂಟಿ ಯೋಜನೆ ನೋಂದಣಿಗೆ ಸಹಾಯವಾಗಲು ಶಿಬಿರಗಳನ್ನು ಏರ್ಪಡಿಸಲಾಗಿತ್ತು. ಇದರಿಂದ ಜಿಲ್ಲೆಯ ಬಹುತೇಕ ಜನರು ಒಂದಲ್ಲೊಂದು ಗ್ಯಾರಂಟಿ ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದರು. 

ಸರ್ಕಾರದ ಯೋಜನೆಯು ಯಾವುದೇ ಮಧ್ಯವರ್ತಿಗಳ ನೆರವಿಲ್ಲದ ಜನರಿಗೆ ನೇರವಾಗಿ ತಲುಪುತ್ತಿರುವ ಒಂದು ದಾಖಲೆಯ ಕಾರ್ಯಕ್ರಮವಾಗಿದೆ. ಈ ಯಶಸ್ಸಿನಿಂದಾಗಿ ಹಲವಾರು ರಾಜ್ಯಗಳು ಕರ್ನಾಟಕದ ಮಾದರಿಯಲ್ಲಿ ಗ್ಯಾರಂಟಿ ಯೋಜನೆ ಜಾರಿಗೆ ತಂದಿದೆ ಎಂದು ಭರತ್ ಮುಂಡೋಡಿ  ತಿಳಿಸಿದರು.

ಗ್ಯಾರಂಟಿ ಯೋಜನೆಯ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ, ಮಾಸಿಕ 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆ, ಉಚಿತ ವಿದ್ಯುತ್ ನೀಡುವ ಗೃಹಜ್ಯೋತಿ ಯೋಜನೆ ಜಿಲ್ಲೆಯಲ್ಲಿ ಅತ್ಯಂತ ಯಶಸ್ವಿಯಾಗಿದೆ ಎಂದು ಹೇಳಿದರು.

ಸುಳ್ಯ ತಹಶೀಲ್ದಾರ್ ಮಂಜುಳಾ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ  ಅವರು ಮಾತನಾಡಿದರು. ಸಮಾರಂಭದಲ್ಲಿ ಕರ್ನಾಟಕ ಅರೆಭಾಷಾ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಸ್ತಫಾ, ಸುಳ್ಯ ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ, ರಿಯಾಝ್, ಜಿಲ್ಲಾ ಮತ್ತು ತಾಲೂಕು ಗ್ಯಾರಂಟಿ ಯೋಜನೆ ಸಮಿತಿ ಸದಸ್ಯರು ಭಾಗವಹಿಸಿದ್ದರು. 

ಜಿಲ್ಲಾ ವಾರ್ತಾಧಿಕಾರಿ ಬಿ ಎ ಖಾದರ್ ಶಾ ಸ್ವಾಗತಿಸಿ, ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹಮೀದ್ ಕುತ್ತಮೊಟ್ಟೆ ವಂದಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳು ದ.ಕ. ಜಿಲ್ಲೆಯಲ್ಲಿ ಪರಿಣಾಮಕಾರಿ ಜಾರಿ : ಭರತ್ ಮುಂಡೋಡಿ Rating: 5 Reviewed By: karavali Times
Scroll to Top