ಕೊಡಾಜೆ ಐಕ್ಯ ವೇದಿಕೆ ಅಧ್ಯಕ್ಷರಾಗಿ ಅಶ್ರಫ್ ಭಾರತ್ ಕಾರ್ಸ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಅನಂತಾಡಿ ಆಯ್ಕೆ - Karavali Times ಕೊಡಾಜೆ ಐಕ್ಯ ವೇದಿಕೆ ಅಧ್ಯಕ್ಷರಾಗಿ ಅಶ್ರಫ್ ಭಾರತ್ ಕಾರ್ಸ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಅನಂತಾಡಿ ಆಯ್ಕೆ - Karavali Times

728x90

24 November 2025

ಕೊಡಾಜೆ ಐಕ್ಯ ವೇದಿಕೆ ಅಧ್ಯಕ್ಷರಾಗಿ ಅಶ್ರಫ್ ಭಾರತ್ ಕಾರ್ಸ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಅನಂತಾಡಿ ಆಯ್ಕೆ

ಬಂಟ್ವಾಳ, ನವೆಂಬರ್ 24, 2025 (ಕರಾವಳಿ ಟೈಮ್ಸ್) : ಮಾಣಿ ಸಮೀಪದ ಕೊಡಾಜೆ ಐಕ್ಯ ವೇದಿಕೆಯ ನೂತನ ಅಧ್ಯಕ್ಷರಾಗಿ ಅಶ್ರಫ್ ಭಾರತ್ ಕಾರ್ಸ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ  ಆಯ್ಕೆಯಾದರು ಶರೀಫ್ ಅನಂತಾಡಿ ಅವರು ಆಯ್ಕೆಯಾಗಿದ್ದಾರೆ. 

ವೇದಿಕೆಯ ಅಧ್ಯಕ್ಷ ಫಾರೂಕ್ ಗೋಳಿಕಟ್ಟೆ ಅವರ ಅಧ್ಯಕ್ಷತೆಯಲ್ಲಿ ನವಂಬರ್ 23 ರಂದು ನಡೆದ ವಾರ್ಷಿಕ ಮಹಾಸಭೆಯಲ್ಲಿ ಈ ಆಯ್ಕೆ ಪ್ರಕ್ರಿಯೆ ನಡೆದಿದೆ. ಗೌರವಾಧ್ಯಕ್ಷ ಲತೀಫ್ ನೇರಳಕಟ್ಟೆ ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ಕೊಡಾಜೆ ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಅಬ್ಬಾಸ್ ನೇರಳಕಟ್ಟೆ ಶುಭ ಹಾರೈಸಿದರು.

ಐಕ್ಯ ವೇದಿಕೆಯ ನೂತನ ಅಧ್ಯಕ್ಷರಾಗಿ ಭಾರತ್ ವೆಹಿಕಲ್ ಬಜಾರ್ ಮಾಲಕ ಅಶ್ರಫ್ ತಿಂಗಳಾಡಿ, ಉಪಾಧ್ಯಕ್ಷರಾಗಿ ರಝಾಕ್ ಅನಂತಾಡಿ, ಆದಂ ಎಸ್ ಎಂ ಎಸ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಅನಂತಾಡಿ, ಜೊತೆ ಕಾರ್ಯದರ್ಶಿಯಾಗಿ ಎಸ್ ಎಸ್ ಮಸೂದ್ ಕೊಡಾಜೆ, ಕೋಶಾಧಿಕಾರಿಯಾಗಿ ಎಸ್ ಎಸ್ ರಫೀಕ್ ಕೊಡಾಜೆ ಆಯ್ಕೆಯಾದರು. 

ಗೌರವ ಸಲಹೆಗಾರರಾಗಿ ನಿಕಟಪೂವಾಧ್ಯಕ್ಷ ಫಾರೂಕ್ ಗೋಳಿಕಟ್ಟೆ, ಸೋಡ್ತಿ ಉಸ್ತುವಾರಿಯಾಗಿ ನಿಕಟಪೂರ್ವ ಕೋಶಾಧಿಕಾರಿ ರಿಯಾಝ್ ನೇರಳಕಟ್ಟೆ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಮನ್ಸೂರ್ ನೇರಳಕಟ್ಟೆ, ಪತ್ರಿಕಾ ಕಾರ್ಯದರ್ಶಿಗಳಾಗಿ ನೌಫಲ್ ಕೊಡಾಜೆ ಹಾಗೂ ಮಜೀದ್ ಅನಂತಾಡಿ, ಕ್ರೀಡಾ ಕಾರ್ಯದರ್ಶಿಗಳಾಗಿ ರಫೀಕ್ ಪಂತಡ್ಕ ಹಾಗೂ ಫಾರೂಕ್ ಕೊಡಾಜೆ, ಆರೋಗ್ಯ ಕಾರ್ಯದರ್ಶಿಯಾಗಿ ಸಲೀಂ ಪರ್ಲೊಟ್ಟು, ಶೈಕ್ಷಣಿಕ ಕಾರ್ಯದರ್ಶಿಯಾಗಿ ಹಫೀಝ್ ನೇರಳಕಟ್ಟೆ, ಸಾಮಾಜಿಕ ಕಾರ್ಯದರ್ಶಿಯಾಗಿ ಫಾರೂಕ್ ಪಂತಡ್ಕ ಅವರನ್ನು ಆರಿಸಲಾಯಿತು.

ಕಾರ್ಯದರ್ಶಿ ಶರೀಫ್ ಅನಂತಾಡಿ ಸ್ವಾಗತಿಸಿ, ವರದಿ ಹಾಗೂ ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಕೋಶಾಧಿಕಾರಿ ರಿಯಾಝ್ ನೇರಳಕಟ್ಟೆ ವಂದಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಕೊಡಾಜೆ ಐಕ್ಯ ವೇದಿಕೆ ಅಧ್ಯಕ್ಷರಾಗಿ ಅಶ್ರಫ್ ಭಾರತ್ ಕಾರ್ಸ್, ಪ್ರಧಾನ ಕಾರ್ಯದರ್ಶಿಯಾಗಿ ಶರೀಫ್ ಅನಂತಾಡಿ ಆಯ್ಕೆ Rating: 5 Reviewed By: karavali Times
Scroll to Top