ನವೆಂಬರ್ 15 ರಂದು ಉಸ್ತುವಾರಿ ಸಚಿವ ಗುಂಡೂರಾವ್ ಮಂಗಳೂರು ಪ್ರವಾಸ : ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿ - Karavali Times ನವೆಂಬರ್ 15 ರಂದು ಉಸ್ತುವಾರಿ ಸಚಿವ ಗುಂಡೂರಾವ್ ಮಂಗಳೂರು ಪ್ರವಾಸ : ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿ - Karavali Times

728x90

12 November 2025

ನವೆಂಬರ್ 15 ರಂದು ಉಸ್ತುವಾರಿ ಸಚಿವ ಗುಂಡೂರಾವ್ ಮಂಗಳೂರು ಪ್ರವಾಸ : ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿ

ಮಂಗಳೂರು, ನವೆಂಬರ್ 12, 2025 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ನವೆಂಬರ್ 15 ರಂದು  ದಕ್ಷಿಣ ಕನ್ನಡ ಜಿಲ್ಲೆಗೆ  ಆಗಮಿಸಲಿದ್ದಾರೆ.

ಬೆಳಿಗ್ಗೆ 9.55ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, 10.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯುವ 2025-26ನೇ ಸಾಲಿನ ದ್ವಿತೀಯ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವರು. ಮಧ್ಯಾಹ್ನ 2.30ಕ್ಕೆ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆ ಮುಂದುವರಿಕೆ. 3.30ಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  ಜಿಲ್ಲಾ ಯೋಜನಾ ಸಮಿತಿಯ ಸಭೆಯಲ್ಲಿ ಭಾಗವಹಿಸಲಿದ್ದು, ರಾತ್ರಿ 10.45ಕ್ಕೆ ಸಚಿವರು ಬೆಂಗಳೂರಿಗೆ ತೆರಳುವರು ಎಂದು ಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ನವೆಂಬರ್ 15 ರಂದು ಉಸ್ತುವಾರಿ ಸಚಿವ ಗುಂಡೂರಾವ್ ಮಂಗಳೂರು ಪ್ರವಾಸ : ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗಿ Rating: 5 Reviewed By: karavali Times
Scroll to Top