ಬಂಟ್ವಾಳ, ನವೆಂಬರ್ 27, 2025 (ಕರಾವಳಿ ಟೈಮ್ಸ್) : ಪಿಕಪ್ ವಾಹನ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಾಯಗೊಂಡ ಘಟನೆ ಬಿ ಮೂಡ ಗ್ರಾಮದ ತಲಪಾಡಿ ಅನುಗ್ರಹ ಶೋ ರೂಂ ಬಳಿ ಬುಧವಾರ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರನನ್ನು ಅಬ್ದುಲ್ ಜಬ್ಬಾರ್ ಎಂದು ಹೆಸರಿಸಲಾಗಿದೆ. ಜಬ್ಬಾರ್ ತನ್ನ ಸ್ಕೂಟರಿನಲ್ಲಿ ಮಂಗಳೂರು-ಬಿ ಸಿ ರೋಡು ಏಕಮುಖ ರಸ್ತೆಯಲ್ಲಿ ಮಂಗಳೂರು ಕಡೆಯಿಂದ ಬಿ ಸಿ ರೋಡು ಕಡೆಗೆ ಬರುತ್ತಿದ್ದ ವೇಳೆ ವಿರುದ್ದ ದಿಕ್ಕಿನಲ್ಲಿ ಮುಹಮ್ಮದ್ ಇಕ್ಬಾಲ್ ಎಂಬವರು ಚಲಾಯಿಸಿಕೊಂಡು ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಅಪಘಾತದಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದ ಜಬ್ಬಾರ್ ಅವರಿಗೆ ಗಾಯಗಳಾಗಿವೆ. ಅವರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಎಳನೀರು ಮಾರಾಟಗಾರ, ಶಿವಮೊಗ್ಗ ನಿವಾಸಿ ಮುನ್ನ ಅಲಿಯಾಸ್ ಚಂದಪೀರ್ ಎಂಬವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment