ಬಂಟ್ವಾಳ, ಡಿಸೆಂಬರ್ 29, 2025 (ಕರಾವಳಿ ಟೈಮ್ಸ್) : ಕ್ರೀಡೆಯು ಸಮಾಜಮುಖಿ ಕೆಲಸಗಳಿಗೆ ಪ್ರೇರಣೆಯಾಗಲಿ ಹಾಗೂ ಸಾಮರಸ್ಯ ಸಮಾಜಕ್ಕೆ ನಿರ್ಮಾಣಕ್ಕೆ ಸಹಕಾರಿಯಾಗಲಿ ಎಂದು ಪತ್ರಕರ್ತ ಸಂತೋಷ್ ನೆತ್ತರಕೆರೆ ಹಾರೈಸಿದರು.
ಬೊಳ್ಳಾರಿ ಆಶೀರ್ವಾದ್ ಸೇವಾ ಸಂಘದ ಅಶ್ರಯದಲ್ಲಿ ನಡೆದ ಆಶೀರ್ವಾದ್ ಪ್ರೀಮಿಯರ್ ಲೀಗ್ ಸೀಸನ್-3 ಕ್ರಿಕೆಟ್ ಪಂದ್ಯಾಟ ಉದ್ಘಾಟಿಸಿ ಅವರು ಮಾತನಾಡಿದರು.
ಈ ಸಂದರ್ಭ ಬಂಟ್ವಾಳ ತಾ ಪಂ ಮಾಜಿ ಸದಸ್ಯ ಗಣೇಶ್ ಸುವರ್ಣ ತುಂಬೆ, ಶ್ರೀ ಶಾರದಾ ಪೂಜಾ ರಜತ ಮಹೋತ್ಸವ ಸಮಿತಿ ಅಧ್ಯಕ್ಷ ರಾಘವ ಬಂಗೇರ ಪೆರ್ಲಬೈಲು, ಪ್ರಮುಖರಾದ ಜಗದೀಶ ಪೂಜಾರಿ ಕುಮ್ಡೇಲ್, ದಿವಾಕರ ಪೆರ್ಲಬೈಲು, ನಾರಾಯಣ್ ಕಿರೋಡಿಯನ್, ಸುಧಾಕರ ಕೊಟ್ಟಿಂಜ, ಗೋಪಾಲ್ ಬೊಳ್ಳಾರಿ, ಪ್ರದೀಪ್ ಕುಮಾರ್ ಮೂದಲ್ಮೆ, ಅಶೋಕ್ ಕೊಂಡಣ, ಪ್ರಿಯಾ ಸತೀಶ್, ಜಾಲಜಾಕ್ಷಿ ಕೋಟ್ಯಾನ್, ದೀಪಕ್ ಬೊಳ್ಳಾರಿ, ದಯಾನಂದ ಬೊಳ್ಳಾರಿ, ಭವಾನಿ ಶಂಕರ್ ಮೊದಲಾದವರು ಭಾಗವಹಿಸಿದ್ದರು.
ಸಂದೀಪ್ ಕುಲಾಲ್ ವಂದಿಸಿ, ಸುಶಾನ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು. ವಿನೋದ್ ಬೊಳ್ಳಾರಿ ಸಹಕರಿಸಿದರು.



















0 comments:
Post a Comment