ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವ ನಿಟ್ಟಿನಲ್ಲಿ ಸರಕಾರ ಹಾಗೂ ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸಲ್ಲ : ಗೃಹ ಸಚಿವ ಡಾ ಜಿ ಪರಮೇಶ್ವರ್ - Karavali Times ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವ ನಿಟ್ಟಿನಲ್ಲಿ ಸರಕಾರ ಹಾಗೂ ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸಲ್ಲ : ಗೃಹ ಸಚಿವ ಡಾ ಜಿ ಪರಮೇಶ್ವರ್ - Karavali Times

728x90

7 December 2025

ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವ ನಿಟ್ಟಿನಲ್ಲಿ ಸರಕಾರ ಹಾಗೂ ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸಲ್ಲ : ಗೃಹ ಸಚಿವ ಡಾ ಜಿ ಪರಮೇಶ್ವರ್

 ಕಳೆದ ವರ್ಷದಿಂದ 300 ಕೋಟಿ ಮೌಲ್ಯದ ಮಾದಕ ವಸ್ತು ವಶ, ಹಲವರು ಜೈಲಿಗೆ : ಡ್ರಗ್ಸ್ ಮುಕ್ತ ಕರ್ನಾಟಕ್ಕಾಗಿ ಬೆಂಗಳೂರಿನಲ್ಲಿ ವಿಂಟೇಜ್ ಕಾರ್ ರ್ಯಾಲಿ ಉದ್ಘಾಟನೆ


ಬೆಂಗಳೂರು, ಡಿಸೆಂಬರ್ 07, 2025 (ಕರಾವಳಿ ಟೈಮ್ಸ್) : ರಾಜ್ಯವನ್ನು ಮಾದಕ ವ್ಯಸನಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೆÇಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದ್ದಾರೆ.

ಬೆಂಗಳೂರು ಸಿಟಿ ಪೆÇಲೀಸ್ ಹಾಗೂ ಫೆಡರೇಷನ್ ಆಫ್ ಹಿಸ್ಟೋರಿಕ್ ವೆಹಿಕಲ್ಸ್ ಆಫ್ ಇಂಡಿಯಾ (ಎಫ್ ಎಚ್ ವಿ ಐ) ಸಹಯೋಗದಲ್ಲಿ ಪೌಲ್ ಜಾನ್ ರೆಸಾರ್ಟ್ ಮತ್ತು ಹೊಟೇಲ್ ಸಂಸ್ಥೆ ಡಿಸೆಂಬರ್ 7 ರಂದು ಆಯೋಜಿಸಿದ್ದ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ವಿಂಟೇಜ್ ಕಾರು ರ್ಯಾಲಿ ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ಕರ್ನಾಟಕ ಮಾತ್ರವಲ್ಲ, ವಿಶ್ವದೆಲ್ಲೆಡೆ ಸಮಾಜ ಮಾದಕ ವ್ಯಸನದ ಜತೆ ಹೋಗುತ್ತಿದೆ. ಮಾದಕ ವಸ್ತುಗಳನ್ನು ಯಾರು ಬೆಂಬಲಿಸುತ್ತಾರೋ ಅವರು ಮನುಷ್ಯರಲ್ಲ, ಜನರ ಜೀವನದ ಜತೆ ಆಟವಾಡುತ್ತಾರೆ. ಅವರ ಭವಿಷ್ಯ, ಆರೋಗ್ಯವನ್ನು ನಾಶ ಮಾಡುತ್ತಾರೆ. ಇದನ್ನು ಮನಗಂಡು ನಮ್ಮ ಸರ್ಕಾರ ಕರ್ನಾಟಕವನ್ನು ಮಾದಕ ವ್ಯಸನಮುಕ್ತ ರಾಜ್ಯವಾಗಿ ರೂಪಿಸುವ ಬಗ್ಗೆ ಸರ್ಕಾರ ಘೋಷಿಸಿತ್ತು ಎಂದರು.

ಘೋಷಣೆಯಾದ ಕೂಡಲೇ ಕರ್ನಾಟಕ ಮಾದಕ ವ್ಯಸನ ಮುಕ್ತವಾಯಿತು ಎಂದು ಅರ್ಥವಲ್ಲ. ಅದರ ವಿರುದ್ಧ ಯುದ್ಧ ಆರಂಭಿಸಿದ್ದೇವೆ. ಸರ್ಕಾರ ಮತ್ತು ಪೆÇಲೀಸರು ಯುದ್ಧ ಮಾಡುತ್ತಿದ್ದಾರೆ. ಇದರ ಪರಿಣಾಮ ಕಳೆದ  ವರ್ಷದಿಂದ 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸಾವಿರಾರು ಜನರನ್ನು ಬಂಧಿಸಿದ್ದು, ಕೆಲವರು ಇನ್ನೂ ಜೈಲಿನಲ್ಲಿದ್ದಾರೆ. ವಿದೇಶದಿಂದ ಶಿಕ್ಷಣಕ್ಕಾಗಿ ಬಂದವರೂ ಇಂಥ ದುಷ್ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ ಎಂದವರು ವಿಷಾದಿಸಿದರು. 

ಡ್ರಗ್ಸ್ ದಂಧೆಕೋರರು ಎಷ್ಟು ಕೀಳು ಮಟ್ಟಕ್ಕೆ ಇಳಿದ್ದಾರೆ ಎಂದರೆ, ಶಾಲೆಗೆ ತೆರಳಿ ಚಾಕೋಲೇಟ್ ಮೂಲಕ ಮಕ್ಕಳಿಗೆ ಉಚಿತವಾಗಿ ಡ್ರಗ್ಸ್ ಹಂಚುತ್ತಿದ್ದಾರೆ. ಮಕ್ಕಳು ಅದಕ್ಕೆ ದಾಸರಾಗುವಂತೆ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪೆÇಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದ ಗೃಹ ಸಚಿವರು, ಮಾದಕ ವಸ್ತುಗಳ ಬಳಕೆಯಿಂದ ದೂರ ಇರಬೇಕು ಎಂದು ವಿದ್ಯಾರ್ಥಿ ಸಮುದಾಯ ಮತ್ತು ಐಟಿ ಪದವೀಧರರು ಸೇರಿದಂತೆ ಯುವ ಸಮುದಾಯವನ್ನು ಮನವಿ ಮಾಡಿದರು.

ಕಾರ್ಯಕ್ರದಲ್ಲಿ ರಾಜ್ಯ ಪೆÇಲೀಸ್ ಮಹಾನಿರ್ದೇಶಕ ಡಾ. ಎಂ.ಎಸ್. ಸಲೀಂ, ಬೆಂಗಳೂರು ನಗರ ಪೆÇಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್, ಫೆಡೆರೇಷನ್ ಆಫ್ ಹಿಸ್ಟೋರಿಕಲ್ ವೆಹಿಕಲ್ ಇಂಡಿಯಾದ ಡಾ. ರವಿಪ್ರಕಾಶ್, ಚಿತ್ರನಟ ಮದನ್ ಪಟೇಲ್ ಮೊದಲಾದವರು ಭಾಗವಹಿಸಿದ್ದರು. 

ವಿಧಾನಸೌಧದ ಮುಭಾಗದಿಂದ ಹೊಟ ವಿಂಟೇಜ್ ಕಾರುಗಳ ಆಕರ್ಷಕ ಮೆರವಣಿಗೆ, ಬಿಗ್ ಬನಿಯಾನ್ ವೈನ್ ಯಾರ್ಡ್ ಅಂಡ್ ರೆಸಾರ್ಟ್ ತನಕ ಸಾಗಿತು. ಸಾವಿರಾರು ಮಂದಿ ರಸ್ತೆ ಬದಿ ನಿಂತು ಮೆರವಣಿಗೆ ವೀಕ್ಷಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ರಾಜ್ಯವನ್ನು ಡ್ರಗ್ಸ್ ಮಕ್ತಗೊಳಿಸುವ ನಿಟ್ಟಿನಲ್ಲಿ ಸರಕಾರ ಹಾಗೂ ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸಲ್ಲ : ಗೃಹ ಸಚಿವ ಡಾ ಜಿ ಪರಮೇಶ್ವರ್ Rating: 5 Reviewed By: karavali Times
Scroll to Top