ಬಂಟ್ವಾಳ, ಡಿಸೆಂಬರ್ 02, 2025 (ಕರಾವಳಿ ಟೈಮ್ಸ್) : ಬಿ ಮೂಡ ಗ್ರಾಮದ ರೈಲ್ವೆ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಅಟೋ ರಿಕ್ಷಾ ಮಗುಚಿ ಬಿದ್ದು ಪ್ರಯಾಣಿಕರೋರ್ವರು ಗಾಯಗೊಂಡ ಘಟನೆ ನ 30 ರಂದು ಸಂಭವಿಸಿದೆ.
ಗಾಯಾಳುವನ್ನು ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದ ಪಂಜಿಮಾಡಿ ನಿವಾಸಿ ಇಬ್ರಾಹಿಂ (64) ಎಂದು ಹೆಸರಿಸಲಾಗಿದೆ.
ಇವರು ನ 30 ರಂದು ಅಟೋ ರಿಕ್ಷಾದಲ್ಲಿ ಮಹಮ್ಮದ್ ಎಂಬವರ ಜೊತೆಯಲ್ಲಿ ಅಕ್ಕರಂಗಡಿಯಿಂದ ಬಿ ಸಿ ರೋಡು ಕಡೆಗೆ ಸಂಚರಿಸುತ್ತಿದ್ದಾಗ ಬಿ ಮೂಡ ಗ್ರಾಮದ ರೈಲ್ವೆ ನಿಲ್ದಾಣದ ಮುಂಭಾಗ ಚಾಲಕನ ದುಡುಕುತನ ಹಾಗೂ ಅಜಾಗರೂಕತೆಯಿಂದ ಅಟೋ ರಿಕ್ಷಾ ಮಗುಚಿ ಬಿದ್ದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಇಬ್ರಾಹಿಂ ಅವರು ಗಾಯಗೊಂಡಿದ್ದು, ಅವರನ್ನು ಬಿ ಸಿ ರೋಡಿನ ಸೋಮಯಾಜಿ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೊಲೆಸೋ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment