ಗ್ರಾಹಕ ಕ್ಲಬ್ ಸಂಯೋಜಕ ಶಿಕ್ಷಕರಿಗೆ ಏಕದಿನ ತರಬೇತಿ ಶಿಬಿರ - Karavali Times ಗ್ರಾಹಕ ಕ್ಲಬ್ ಸಂಯೋಜಕ ಶಿಕ್ಷಕರಿಗೆ ಏಕದಿನ ತರಬೇತಿ ಶಿಬಿರ - Karavali Times

728x90

3 December 2025

ಗ್ರಾಹಕ ಕ್ಲಬ್ ಸಂಯೋಜಕ ಶಿಕ್ಷಕರಿಗೆ ಏಕದಿನ ತರಬೇತಿ ಶಿಬಿರ

ಮಂಗಳೂರು, ಡಿಸೆಂಬರ್ 03, 2025 (ಕರಾವಳಿ ಟೈಮ್ಸ್) : ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಗ್ರಾಹಕ ಕ್ಲಬ್ ಸಂಯೋಜಕ ಶಿಕ್ಷಕರಿಗೆ ಗ್ರಾಹಕ ಶಿಕ್ಷಣದ ಒಂದು ದಿನದ ತರಬೇತಿ ಕಾರ್ಯಾಗಾರ ಡಿ 3 ರಂದು ನಗರದ ಬಿಜೈ ಕಚೇರಿಯಲ್ಲಿ ನಡೆಯಿತು.

ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಗೌರವಾಧ್ಯಕ್ಷ ಎಂ.ಜೆ ಸಾಲ್ಯಾನ್ ಗ್ರಾಹಕ ಜಾಗೃತಿ ಮೂಡಿಸುವಲ್ಲಿ ಶಿಕ್ಷಕರ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಅದೇ ರೀತಿ ಗ್ರಾಹಕ ಕಾಯಿದೆ ಜಾರಿಗೆ ಬಂದ ಮಾಹಿತಿಯನ್ನು  ನೀಡಿದರು.

ಗ್ರಾಹಕ ಕ್ಲಬ್‍ಗಳ ರಚನೆ, ನಿರ್ವಹಣೆ ಹಾಗೂ ಅದರ ಚಟುವಟಿಕೆಗಳ ಬಗ್ಗೆ ಮಾಹಿತಿಯನ್ನು ಜತೆ ಕಾರ್ಯದರ್ಶಿ ರಾಯಿ ರಾಜ್ ಕುಮಾರ್ ನೀಡಿದರು. ಗ್ರಾಹಕ ಕಾಯಿದೆಯಲ್ಲಿ ಜಾರಿಗೆ ತರುವಲ್ಲಿರುವ ಅಡೆತಡೆಗಳನ್ನು ನಿವಾರಿಸಿಕೊಳ್ಳಲು ಇರುವ ಸಾಧ್ಯತೆಗಳ ಬಗ್ಗೆ ತಿಳಿಸಿದರು. ಜಿಲ್ಲಾ ಗ್ರಾಹಕ ಆಯೋಗ, ಅದರ ರಚನೆ, ಕಾರ್ಯ ವ್ಯಾಪ್ತಿಗಳ ಬಗ್ಗೆ ತಿಳಿಸಿ ಹೇಳಲಾಯಿತು.

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಅಧಿಕಾರಿ ನವೀನ್ ಕೃಷ್ಣ ಅವರು ಗ್ರಾಹಕ ವ್ಯವಹಾರಗಳ ಚಟುವಟಿಕೆಗಳು ಮತ್ತು ಆಹಾರ ಸರಬರಾಜು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ  ಖಜಾಂಚಿ ಜಯಪ್ರಕಾಶ್ ರಾವ್, ಕಾರ್ಯಾಧ್ಯಕ್ಷ  ರಫೀಕ್ ಕುಕ್ಕಾಡಿ ಹಾಜರಿದ್ದರು. ಮಾಹಿತಿ ಕೇಂದ್ರದ ಅಧ್ಯಕ್ಷೆ ಸುನಂದ ಕುಂಬ್ಳೆ ಸ್ವಾಗತಿಸಿ, ನಿವೃತ್ತ ನರ್ಸ್ ಶಿಕ್ಷಕಿ ಸುಮಂಗಲಾ ವಂದಿಸಿದರು. ರಾಯಿ ರಾಜ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. 

  • Blogger Comments
  • Facebook Comments

0 comments:

Post a Comment

Item Reviewed: ಗ್ರಾಹಕ ಕ್ಲಬ್ ಸಂಯೋಜಕ ಶಿಕ್ಷಕರಿಗೆ ಏಕದಿನ ತರಬೇತಿ ಶಿಬಿರ Rating: 5 Reviewed By: karavali Times
Scroll to Top