ದ.ಕ. ಜಿಲ್ಲೆಯಲ್ಲಿ ಕ್ಯಾನ್ಸರ್, ಹೃದ್ರೋಗ ಸರಕಾರಿ ಆಸ್ಪತ್ರೆ ಆರಂಭಕ್ಕೆ ಸಿಎಂಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮನವಿ - Karavali Times ದ.ಕ. ಜಿಲ್ಲೆಯಲ್ಲಿ ಕ್ಯಾನ್ಸರ್, ಹೃದ್ರೋಗ ಸರಕಾರಿ ಆಸ್ಪತ್ರೆ ಆರಂಭಕ್ಕೆ ಸಿಎಂಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮನವಿ - Karavali Times

728x90

11 December 2025

ದ.ಕ. ಜಿಲ್ಲೆಯಲ್ಲಿ ಕ್ಯಾನ್ಸರ್, ಹೃದ್ರೋಗ ಸರಕಾರಿ ಆಸ್ಪತ್ರೆ ಆರಂಭಕ್ಕೆ ಸಿಎಂಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮನವಿ

ಮಂಗಳೂರು, ಡಿಸೆಂಬರ್ 11, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ಅಸಾಂಕ್ರಾಮಿಕ ರೋಗಗಳಾದ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಗಳ ಸಂಖ್ಯೆ ಹೆಚ್ಚುತ್ತಿದೆ. ಜಿಲ್ಲೆಗೆ ಭೇಟಿ ನೀಡುತ್ತಿರುವಾಗಲೆಲ್ಲ ಕ್ಯಾನ್ಸರ್ ಮತ್ತು ಹೃದಯ ಸಂಬಂಧಿ ರೋಗಗಳ ಅಗತ್ಯ ಚಿಕಿತ್ಸೆಗೆ ಪ್ರತ್ಯೇಕವಾಗಿ ಸರ್ಕಾರಿ ಆಸ್ಪತ್ರೆಗಳನ್ನು ಪ್ರಾರಂಭಿಸಲು ಜಿಲ್ಲೆಯ ಜನ ಹಾಗೂ ಜನಪ್ರತಿನಿಧಿಗಳು ಆಗ್ರಹಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಂಗಳೂರು ನಗರದ ಹೊರ ವಲಯದ ಮೂಡುಶೆಡ್ಡೆಯ ಕ್ಷಯರೋಗಗಳ ಆಸ್ಪತ್ರೆಯ ಆವರಣದಲ್ಲಿ ಲಭ್ಯವಿರುವ ಜಾಗದಲ್ಲಿ ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ ಮತ್ತು ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಗಳ ಒಂದೊಂದು ಘಟಕಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ದ.ಕ. ಜಿಲ್ಲೆಯಲ್ಲಿ ಕ್ಯಾನ್ಸರ್, ಹೃದ್ರೋಗ ಸರಕಾರಿ ಆಸ್ಪತ್ರೆ ಆರಂಭಕ್ಕೆ ಸಿಎಂಗೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮನವಿ Rating: 5 Reviewed By: karavali Times
Scroll to Top