ಮಂಗಳೂರು, ಡಿಸೆಂಬರ್ 09, 2025 (ಕರಾವಳಿ ಟೈಮ್ಸ್) : ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 11 ರಂದು ಚುನಾವಣೆ ಮತ್ತು ಡಿಸೆಂಬರ್ 13 ರಂದು ಮತ ಎಣಿಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯದ ಪ್ರದೇಶಗಳಲ್ಲಿ ಮತದಾನ ಮತ್ತು ಮತ ಎಣಿಕೆಯ ದಿನಗಳಂದು 3 ಕಿ.ಮೀ. ವ್ಯಾಪ್ತಿಯ ಗಡಿಭಾಗಗಳಲ್ಲಿ “ಶುಷ್ಕದಿನ” ಘೋಷಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಗಡಿಭಾಗವನ್ನು ಹಂಚಿಕೊಂಡಿದ್ದು, ಗಡಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯ 3 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ ಬಾರ್ ಗಳನ್ನು ಡಿಸೆಂಬರ್ 9 ರ ಸಂಜೆ 6 ಗಂಟೆಯಿಂದ ಡಿಸೆಂಬರ್ 11 ರ ಸಂಜೆ 6 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಡಿಸೆಂಬರ್ 12 ರಂದು ಮಧ್ಯ ರಾತ್ರಿ 12 ಗಂಟೆಯಿಂದ ಡಿ 13 ರ ಮಧ್ಯರಾತ್ರಿ 12 ಗಂಟೆಯ ತನಕ ಮುಚ್ಚುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಆದೇಶಿದ್ದಾರೆ.














0 comments:
Post a Comment