ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನಲೆ : ದ.ಕ. ಜಿಲ್ಲೆಯ ಗಡಿಭಾಗಗಳಲ್ಲಿ “ಶುಷ್ಕ ದಿನ” ಘೋಷಿಸಿದ ಡೀಸಿ ದರ್ಶನ್ - Karavali Times ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನಲೆ : ದ.ಕ. ಜಿಲ್ಲೆಯ ಗಡಿಭಾಗಗಳಲ್ಲಿ “ಶುಷ್ಕ ದಿನ” ಘೋಷಿಸಿದ ಡೀಸಿ ದರ್ಶನ್ - Karavali Times

728x90

9 December 2025

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನಲೆ : ದ.ಕ. ಜಿಲ್ಲೆಯ ಗಡಿಭಾಗಗಳಲ್ಲಿ “ಶುಷ್ಕ ದಿನ” ಘೋಷಿಸಿದ ಡೀಸಿ ದರ್ಶನ್

ಮಂಗಳೂರು, ಡಿಸೆಂಬರ್ 09, 2025 (ಕರಾವಳಿ ಟೈಮ್ಸ್) : ಕೇರಳ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಡಿಸೆಂಬರ್ 11 ರಂದು ಚುನಾವಣೆ ಮತ್ತು ಡಿಸೆಂಬರ್ 13 ರಂದು ಮತ ಎಣಿಕೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಕರ್ನಾಟಕ ರಾಜ್ಯದ ಪ್ರದೇಶಗಳಲ್ಲಿ ಮತದಾನ ಮತ್ತು ಮತ ಎಣಿಕೆಯ ದಿನಗಳಂದು 3 ಕಿ.ಮೀ. ವ್ಯಾಪ್ತಿಯ ಗಡಿಭಾಗಗಳಲ್ಲಿ “ಶುಷ್ಕದಿನ” ಘೋಷಿಸಲಾಗಿದೆ. 

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು ಮತ್ತು ಸುಳ್ಯ ತಾಲೂಕುಗಳು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಗಡಿಭಾಗವನ್ನು ಹಂಚಿಕೊಂಡಿದ್ದು, ಗಡಿಭಾಗದಿಂದ ದಕ್ಷಿಣ ಕನ್ನಡ ಜಿಲ್ಲೆಯ 3 ಕಿ.ಮೀ. ವ್ಯಾಪ್ತಿಯಲ್ಲಿರುವ ಮದ್ಯದಂಗಡಿ/ ಬಾರ್ ಗಳನ್ನು ಡಿಸೆಂಬರ್ 9 ರ ಸಂಜೆ 6 ಗಂಟೆಯಿಂದ ಡಿಸೆಂಬರ್ 11 ರ ಸಂಜೆ 6 ಗಂಟೆಯ ತನಕ ಮತ್ತು ಮತ ಎಣಿಕೆಯ ನಿಮಿತ್ತ ಡಿಸೆಂಬರ್ 12 ರಂದು ಮಧ್ಯ ರಾತ್ರಿ 12 ಗಂಟೆಯಿಂದ ಡಿ 13 ರ ಮಧ್ಯರಾತ್ರಿ 12 ಗಂಟೆಯ ತನಕ ಮುಚ್ಚುವಂತೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಆದೇಶಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನಲೆ : ದ.ಕ. ಜಿಲ್ಲೆಯ ಗಡಿಭಾಗಗಳಲ್ಲಿ “ಶುಷ್ಕ ದಿನ” ಘೋಷಿಸಿದ ಡೀಸಿ ದರ್ಶನ್ Rating: 5 Reviewed By: karavali Times
Scroll to Top