ಕೆರೆಗಳ ರಕ್ಷಣೆಗೆ ಇಲಾಖೆಗಳು ನಿರಂತರ ಗಸ್ತು ನಿರ್ವಹಿಸಬೇಕು : ಡೀಸಿ ಸೂಚನೆ - Karavali Times ಕೆರೆಗಳ ರಕ್ಷಣೆಗೆ ಇಲಾಖೆಗಳು ನಿರಂತರ ಗಸ್ತು ನಿರ್ವಹಿಸಬೇಕು : ಡೀಸಿ ಸೂಚನೆ - Karavali Times

728x90

17 December 2025

ಕೆರೆಗಳ ರಕ್ಷಣೆಗೆ ಇಲಾಖೆಗಳು ನಿರಂತರ ಗಸ್ತು ನಿರ್ವಹಿಸಬೇಕು : ಡೀಸಿ ಸೂಚನೆ

ಮಂಗಳೂರು, ಡಿಸೆಂಬರ್ 17, 2025 (ಕರಾವಳಿ ಟೈಮ್ಸ್) : ಜಿಲ್ಲೆಯಲ್ಲಿರುವ ವಿವಿಧ ಕೆರೆಗಳ ರಕ್ಷಣೆಗೆ ಸಂಬಂಧಿಸಿದ ಇಲಾಖೆಗಳು ನಿರಂತರ ಗಸ್ತು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಎಚ್.ವಿ ದರ್ಶನ್ ಹೇಳಿದ್ದಾರೆ.

ಜಿಲ್ಲಾ ಮಟ್ಟದ ಕೆರೆ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ರೀತಿಯ ಕೆರೆಗಳಿವೆ. ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳು, ಸಣ್ಣ ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ  ಕೆರೆಗಳಿವೆ. ಸಂಬಂಧಿಸಿದ ಇಲಾಖೆಗಳು ಕೆರೆಗಳ ಸಂಪೂರ್ಣ ವ್ಯಾಪ್ತಿಯನ್ನು ಆಗ್ಗಿಂದಾಗೆ ಪರಿಶೀಲಿಸಬೇಕು ಎಂದವರು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಕೆ ರಾಜು ಮಾತನಾಡಿ,  ಕೆರೆ ಜಮೀನು ಒತ್ತುವರಿಯಾಗದಂತೆ ಆಗ್ಗಿಂದಾಗೆ ಗಸ್ತು ನಿರ್ವಹಿಸಬೇಕು. ಯಾವುದೇ ಕೆರೆ ಒತ್ತುವರಿ ಆಗಿರುವುದು ಕಂಡುಬಂದಲ್ಲಿ  ಸಂಬಂಧಿಸಿದ ಇಲಾಖಾಧಿಕಾರಿಗಳ ವಿರುದ್ಧವೇ ಪ್ರಕರಣ ದಾಖಲಿಸಲಾಗುವುದು. ಈಗಾಗಲೇ ಒತ್ತುವರಿಯಾಗಿರುವ ಕೆರೆ ಜಮೀನನ್ನು ತೆರವುಗೊಳಿಸಲು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು. ಸಭೆಯಲ್ಲಿ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಕೆರೆಗಳ ರಕ್ಷಣೆಗೆ ಇಲಾಖೆಗಳು ನಿರಂತರ ಗಸ್ತು ನಿರ್ವಹಿಸಬೇಕು : ಡೀಸಿ ಸೂಚನೆ Rating: 5 Reviewed By: karavali Times
Scroll to Top