ಬಂಟ್ವಾಳ, ಡಿಸೆಂಬರ್ 05, 2025 (ಕರಾವಳಿ ಟೈಮ್ಸ್) : ಆಲ್ ಇಂಡಿಯ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ (ಎಐಸಿಸಿಟಿಯು) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಕಾರ್ಮಿಕ ವಿರೋಧಿ ನಾಲ್ಕು ಸಂಹಿತೆ ರದ್ದುಗೊಳಿಸಲು ಒತ್ತಾಯಿಸಿ, ಅಕ್ಷರ ದಾಸೋಹ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸಲು, ಗುತ್ತಿಗೆ ಕಾರ್ಮಿಕ ಪದ್ದತಿ ರದ್ದುಪಡಿಸಬೇಕು, ಗುತ್ತಿಗೆ ಕಾರ್ಮಿಕರನ್ನು ಖಾಯಂಗೊಳಿಸಬೇಕು ಹಾಗೂ ಸಮಾನ ದುಡಿಮೆಗೆ ಸಮಾನ ವೇತನ ನೀಡಬೇಕು ಎಂದು ಆಗ್ರಹಿಸಿ ಜಿಲ್ಲಾ ಮಟ್ಟದ ಪ್ರತಿಭಟನೆ ಡಿಸೆಂಬರ್ 6 ರಂದು ಶನಿವಾರ ಬೆಳಿಗ್ಗೆ ಬಿ ಸಿ ರೋಡಿನ ಆಡಳಿತ ಸೌಧದ ಮುಂಭಾಗ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
5 December 2025
- Blogger Comments
- Facebook Comments
Subscribe to:
Post Comments (Atom)














0 comments:
Post a Comment