ಬಂಟ್ವಾಳ, ಡಿಸೆಂಬರ್ 02, 2025 (ಕರಾವಳಿ ಟೈಮ್ಸ್) : ನರದ ಸಮಸ್ಯೆ ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಮ್ಮುಂಜೆ ಗ್ರಾಮದ ಲಾಡಿ ಎಂಬಲ್ಲಿ ಡಿ 1 ರಂದು ಸಂಭವಿಸಿದೆ.
ಮೃತರನ್ನು ಮೊಹಮ್ಮದ್ ಹನೀಫ್ ಎಂದು ಹೆಸರಿಸಲಾಗಿದೆ. ಇವರು ನರದ ಸಮಸ್ಯೆ ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನ 30 ರಂದು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದು ಬಂದು ಮನೆಯಲ್ಲಿ ಮಲಗಿದ್ದರು. ಡಿ 1 ರಂದು ಬೆಳಿಗ್ಗೆ ಬಾತ್ ರೂಮಿಗೆ ಹೋಗಿ ಬರುತ್ತೇನೆ ಎಂದು ಹೋದವರು ವಯರಿನಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಮೃತರ ಪತ್ನಿ ಉಮೈಬಾನು ಅವರು ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














0 comments:
Post a Comment