ಬಂಟ್ವಾಳ, ಜನವರಿ 03, 2026 (ಕರಾವಳಿ ಟೈಮ್ಸ್) : ವಿಟ್ಲ ಪೆÇಲೀಸ್ ಠಾಣಾ ವ್ಯಾಪ್ತಿಯ ಕೇಪು ಗ್ರಾಮದ ಬಡಕೋಡಿ ನಿವಾಸಿ ಗಣೇಶ ಅಲಿಯಾಸ್ ಗಣೇಶ ಪೂಜಾರಿ ಎಂಬಾತನ ಮೇಲೆ ಹಲ್ಲೆ, ದೊಂಬಿ, ಕೊಲೆ ಯತ್ನ, ಜೂಜು, ಸರಕಾರಿ ನೌಕರನ ಕರ್ತವ್ಯಕ್ಕೆ ಅಡ್ಡಿಯಂತಹ ಒಟ್ಟು 14 ಪ್ರಕರಣಗಳು ದಾಖಲಾಗಿದೆ. ಈತನನ್ನು ವಿಟ್ಲ ಪೆÇಲೀಸ್ ಠಾಣೆಯ ಠಾಣಾಧಿಕಾರಿಗಳ ವರದಿ ಮೇರೆಗೆ ಮಂಗಳೂರು ಸಹಾಯಕ ಆಯುಕ್ತರು ಹಾಗೂ ಉಪವಿಭಾಗೀಯ ದಂಡಾಧಿಕಾರಿಗಳು ದಕ್ಷಿಣ ಕನ್ನಡ ಜಿಲ್ಲೆಯಿಂದ ಹಾಸನ ಜಿಲ್ಲೆಯ ಆಲೂರು ಪೆÇಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಿರುತ್ತಾರೆ. ಸಹಾಯಕ ಆಯುಕ್ತರ ಆದೇಶದಂತೆ ಆರೋಪಿಯನ್ನು ಸುರಕ್ಷಿತವಾಗಿ ಆಲೂರು ಪೆÇಲೀಸ್ ಠಾಣೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
3 January 2026
- Blogger Comments
- Facebook Comments
Subscribe to:
Post Comments (Atom)



















0 comments:
Post a Comment