ಜಾರ್ಖಂಡ್ ಮೂಲದ ವಲಸೆ ಕಾರ್ಮಿಕಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಕಾವೂರು ಪೊಲೀಸರು - Karavali Times ಜಾರ್ಖಂಡ್ ಮೂಲದ ವಲಸೆ ಕಾರ್ಮಿಕಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಕಾವೂರು ಪೊಲೀಸರು - Karavali Times

728x90

13 January 2026

ಜಾರ್ಖಂಡ್ ಮೂಲದ ವಲಸೆ ಕಾರ್ಮಿಕಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಕಾವೂರು ಪೊಲೀಸರು

ಮಂಗಳೂರು, ಜನವರಿ 13, 2026 (ಕರಾವಳಿ ಟೈಮ್ಸ್) : ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಾರ್ಖಂಡ್ ಮೂಲದ ವಲಸೆ ಕಾರ್ಮಿಕಗೆ ಬಾಂಗ್ಲಾ ನಿವಾಸಿಯೆಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ. 

ಬಂಧಿತ ಅರೋಪಿಗಳನ್ನು ಕೂಳೂರು ನಾರಾಯಣ ಗುರು ಭಜನಾ ಮಂದಿರ ಬಳಿಯ ರಾಮಣ್ಣ ಜ್ಯೋಗಿ ಕಂಪೌಂಡ್ ನಿವಾಸಿ ರಾಮ್ ದಾಸ್ ಎಂಬವರ ಪುತ್ರ ರತೀಶ್ ದಾಸ್ (32), ಕೂಳೂರು ನಾರಾಯಣ ಗುರು ಭಜನಾ ಮಂದಿರ ಬಳಿ ನಿವಾಸಿ ಶ್ರೀನಿವಾಸ ಎಂಬವರ ಪುತ್ರ ಧನುಷ್ (24) ಹಾಗೂ ಕೂಳೂರು ರಾಯರಕಟ್ಟೆ ಪ್ರೈಮ್ ಕಂಪೌಂಡ್ ನಿವಾಸಿ ಸುರೇಶ್ ಎಂಬವರ ಪುತ್ರ ಸಾಗರ್ (24) ಎಂದು ಹೆಸರಿಸಲಾಗಿದೆ. 

ಮಂಗಳೂರು ಉತ್ತರ ಉಪವಿಭಾಗದ ಎ.ಸಿ.ಪಿ. ಶ್ರೀಕಾಂತ್ ಕೆ. ಅವರ ಮಾರ್ಗದರ್ಶನದಂತೆ ಕಾವೂರು ಪೊಲೀಸ್ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ರಾಘವೇಂದ್ರ ಎಂ. ಬೈಂದೂರು ಅವರು, ಪಿಎಸ್ಸೈ ಮಲ್ಲಿಕಾರ್ಜುನ ಬಿರಾದಾರ ಹಾಗೂ ಕಾವೂರು ಠಾಣಾ ಪೊಲೀಸ್ ಸಿಬ್ಬಂದಿಗಳಾದ ಎಎಸ್ಸೈ ಚಂದ್ರಹಾಸ್ ಸನೀಲ್, ಎಚ್ ಸಿ ಬಾಲಕೃಷ್ಣ ಹಾಗೂ ಸಿಬ್ಬಂದಿಗಳಾದ ರಾಘವೇಂದ್ರ, ರಿಯಾಜ್, ನಾಗರಾಜ್, ಹನುಮಂತ ಅವರುಗಳೊಂದಿಗೆ ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ. 

ಜನವರಿ 11 ರಂದು ಸಂಜೆ 6.05ಕ್ಕೆ 4 ಜನ ಆರೋಪಿಗಳು ವ್ಯಕ್ತಿಯನ್ನು ತಡೆದು ನಿಲ್ಲಿಸಿ ನೀನು ಹಿಂದೂನಾ ಮುಸ್ಲಿಂನಾ ಎಂದು ಜೋರು ಮಾಡಿ ನೀನು ಬಾಂಗ್ಲಾ ದೇಶದನು ಬೆವರ್ಸಿ ರಂಡೆ ಮಗ ಎಂದು ಅವಾಚ್ಯ ಶಬ್ದಗಳಿಂದ ಬೈದು ಸಾರಣಿ ಮಾಡುವ ಕರಣಿ (ತಾಪಿ) ಯಿಂದ ಹಲ್ಲೆ ನಡೆಸಿ ಕೊಲೆಯತ್ನ ಮಾಡಿದ ಬಗ್ಗೆ ಜನವರಿ 12 ರಂದು ಕಾವೂರು ಪೊಲೀಸ್ ಠಾಣೆಯಲ್ಲಿ ಠಾಣಾ ಅಪರಾಧ ಕ್ರಮಾಂಕ 03/2026 ಕಲಂ 126(2), 352, 351(3), 353, 109, 118(1) ಜೊತೆಗೆ 3(5) ಭಾರತೀಯ ನ್ಯಾಯ ಸಂಹಿತೆ-2023 ರಂತೆ ಪ್ರಕರಣ ದಾಖಲಾಗಿತ್ತು. 

  • Blogger Comments
  • Facebook Comments

0 comments:

Post a Comment

Item Reviewed: ಜಾರ್ಖಂಡ್ ಮೂಲದ ವಲಸೆ ಕಾರ್ಮಿಕಗೆ ಹಲ್ಲೆ ಪ್ರಕರಣ : ಮೂವರು ಆರೋಪಿಗಳನ್ನು ಬಂಧಿಸಿದ ಕಾವೂರು ಪೊಲೀಸರು Rating: 5 Reviewed By: karavali Times
Scroll to Top