ಮಧ್ವ : ಕಾರು ಡಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಗಾಯ - Karavali Times ಮಧ್ವ : ಕಾರು ಡಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಗಾಯ - Karavali Times

728x90

25 January 2026

ಮಧ್ವ : ಕಾರು ಡಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಗಾಯ

ಬಂಟ್ವಾಳ, ಜನವರಿ 26, 2026 (ಕರಾವಳಿ ಟೈಮ್ಸ್) : ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಕಾವಳಪಡೂರು ಗ್ರಾಮದ ಮಧ್ವ ಎಂಬಲ್ಲಿ ಜನವರಿ 24 ರಂದು ರಾತ್ರಿ ಸಂಭವಿಸಿದೆ. 

ಗಾಯಗೊಂಡವರನ್ನು ಸುಧಾಕರ ಎಂದು ಹೆಸರಿಸಲಾಗಿದೆ. ಇವರು ಬಂಟ್ವಾಳ-ಕಡೂರು ಹೆದ್ದಾರಿ ದಾಟಿ ಬರುತ್ತಿದ್ದ ವೇಳೆ ಬಿ ಸಿ ರೋಡು ಕಡೆಯಿಂದ ಅಲೋಶಿಯಸ್ ಮಸ್ಕರೇನಸ್ ಎಂಬವರು ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 

ಅಪಘಾತದಿಂದ ರಸ್ತೆಗೆ ಎಸೆಯಲ್ಪಟ್ಟ ಸುಧಾಕರ ಅವರ ತಲೆ ಹಾಗೂ ಕಾಲಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಪಡೀಲ್ ಜನಪ್ರಿಯ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಅವರ ಸಂಬಂಧಿ ವಸಂತ ಕುಮಾರ್ ಅವರು ನೀಡಿದ ದೂರಿನಂತೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಮಧ್ವ : ಕಾರು ಡಿಕ್ಕಿ ಹೊಡೆದು ಹೆದ್ದಾರಿ ದಾಟುತ್ತಿದ್ದ ವ್ಯಕ್ತಿಗೆ ಗಾಯ Rating: 5 Reviewed By: karavali Times
Scroll to Top