ಮಂಚಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ವಿ.ಎಸ್. ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ಶಿಬಿರ - Karavali Times ಮಂಚಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ವಿ.ಎಸ್. ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ಶಿಬಿರ - Karavali Times

728x90

30 January 2026

ಮಂಚಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ವಿ.ಎಸ್. ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ಶಿಬಿರ

ಬಂಟ್ವಾಳ, ಜನವರಿ 30, 2026 (ಕರಾವಳಿ ಟೈಮ್ಸ್) : ವಿದ್ಯಾರ್ಥಿಯು ಕೇವಲ ಅಧ್ಯಯನಕ್ಕೆ ಸೀಮಿತವಾಗಿರದೆ ಸಾಮಾಜಿಕ ಜೀವನದ ಆಗು-ಹೋಗುಗಳ ಬಗ್ಗೆ ಅರಿವಿರಬೇಕು. ಆಗ ಮಾತ್ರ ಅವನು ಸಂಘ ಜೀವಿಯಾಗಲು ಸಾಧ್ಯ ಎಂದು ಮಂಚಿ ಸರಕಾರಿ ಪ್ರೌಢಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ್ಯ ಶಿವಶಂಕರ್ ರಾವ್ ಹೇಳಿದರು. 

ಮಂಚಿ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯುತ್ತಿರುವ ಬಂಟ್ವಾಳ ಎಸ್ ವಿ ಎಸ್ ಕಾಲೇಜಿನ 2025-26ನೇ ಸಾಲಿನ ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟಸಿ ಅವರು ಮಾತನಾಡಿದರು. 

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಎಸ್ ವಿ ಎಸ್ ಕಾಲೇಜು ಪಾಂಶುಪಾಲ ಎಂ ಡಿ ಮಂಚಿ ಮಾತನಾಡಿ, ಯಾವುದೇ ವಿದ್ಯಾರ್ಥಿಗೆ ಶೈಕ್ಷಣಿಕ ಪ್ರಗತಿಯೊಂದಿಗೆ ನೈತಿಕ ಹಾಗೂ ಸಾಮಾಜಿಕ ಪ್ರಗತಿ ಅತಿ ಮುಖ್ಯ. ಅದು ಶಾಲಾ-ಕಾಲೇಜುಗಳಿಗಿಂತ ಈ ರೀತಿಯ ಶಿಬಿರಗಳಿಂದ ದೊರಕುತ್ತದೆ ಎಂದರು. 

ಸಾಲೆತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷ ಉಮಾನಾಥ್ ರೈ ಮೇರಾವು, ಮಂಚಿ ಸರಕಾರಿ ಪ್ರೌಢಶಾಲಾ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರಾಮ್ ಪ್ರಸಾದ್ ರೈ ತಿರುವಾಜೆ, ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸುಶೀಲ  ಮಾತನಾಡಿದರು. ಎಸ್ ವಿ ಎಸ್ ಕಾಲೇಜು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶಿವಣ್ಣ ಪ್ರಭು ಎನ್ ಎಸ್ ಎಸ್ ಶಿಬಿರದ ಮಹತ್ವದ ಬಗ್ಗೆ ವಿವರಿಸಿದರು. 

ಮಂಚಿ ಸರಕಾರಿ ಪ್ರೌಢಶಾಲಾ ಶಿಕ್ಷಕ ತಾರಾನಾಥ ಕೈರಂಗಳ, ಎನ್ ಎಸ್ ಎಸ್ ಘಟಕ ನಾಯಕರಾದ  ಕು ಕರಿಷ್ಮಾ, ಅಮಿತ್ ಪ್ರಭು ಭಾಗವಹಿಸಿದ್ದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ ಡಾ ಕಾಶೀನಾಥ ಶಾಸ್ತ್ರಿ ಎಚ್ ವಿ ಸ್ವಾಗತಿಸಿ, ಪ್ರಾಧ್ಯಾಪಕಿ ಕು ನಿರೀಕ್ಷಾ ವಂದಿಸಿದರು. ಕು ಕರಿಷ್ಮಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಉಪನ್ಯಾಸಕಿ ಕು ಕಾವ್ಯ ಕಾರ್ಯಕ್ರಮ ನಿರೂಪಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಮಂಚಿ ಸರಕಾರಿ ಪ್ರೌಢಶಾಲೆಯಲ್ಲಿ ಎಸ್.ವಿ.ಎಸ್. ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ಶಿಬಿರ Rating: 5 Reviewed By: karavali Times
Scroll to Top