ಬೆಳ್ತಂಗಡಿ, ಫೆಬ್ರವರಿ 09, 2026 (ಕರಾವಳಿ ಟೈಮ್ಸ್) : ಶಾಲಾ ಬಾಲಕಿಯನ್ನು ಓಮ್ನಿ ವಾಹನದಲ್ಲಿ ಬಂದ ಮೂವರು ದುಷ್ಕರ್ಮಿಗಳು ಅಪಹರಣಕ್ಕೆ ಯತ್ನಿಸಿದ್ದು, ಪ್ರತಿರೋಧ ವ್ಯಕ್ತಪಡಿಸಿದ ವೇಳೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಫೆಬ್ರವರಿ 9 ರಂದು ಸೋಮವಾರ ಬೆಳಿಗ್ಗೆ ನಡೆದಿದೆ.
ಬೆಳಿಗ್ಗೆ ಸುಮಾರು 8.30ರ ವೇಳೆಗೆ 16 ವರ್ಷದ ಶಾಲಾ ಬಾಲಕಿ ಶಾಲೆಗೆ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ, ತನ್ನ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿ, ಮಾರುತಿ ಓಮ್ನಿ ವಾಹನದಲ್ಲಿ ಬಂದ ಮೂವರು ಮುಖ ಮುಚ್ಚಿಕೊಂಡಿದ್ದ ವ್ಯಕ್ತಿಗಳು ಅವಳನ್ನು ತಡೆದು ಅಪಹರಿಸಲು ಪ್ರಯತ್ನಿಸಿದ್ದಾರೆ ಮತ್ತು ಅವಳು ಪ್ರತಿರೋಧಿಸಿದಾಗ, ಅವರು ಚಾಕುವಿನಿಂದ ಅವಳ ಎಡ ಕೈಗೆ ನಾಲ್ಕು ಬಾರಿ ಇರಿದಿರುತ್ತಾರೆ. ಗಾಯಗಳು ಮೇಲ್ಮೈಯಾಗಿದ್ದು, ಹೊಲಿಗೆ ಹಾಕಿರುವುದಿಲ್ಲ. ಈ ಬಗ್ಗೆ ಬಾಲಕಿಯು ತನ್ನ ಪೆÇೀಷಕರೊಂದಿಗೆ ಠಾಣೆಗೆ ಹಾಜರಾಗಿ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.













0 comments:
Post a Comment