ಮಂಗಳೂರು, ಫೆಬ್ರವರಿ 09, 2026 (ಕರಾವಳಿ ಟೈಮ್ಸ್) : ಕಾರಿನ ಡ್ಯಾಶ್ ಬೋರ್ಡಿನಲ್ಲಿಟ್ಟಿದ್ದ ಹಣ ಕಳವು ಪ್ರಕರಣವನ್ನು ಕ್ಷಿಪ್ರವಾಗಿ ಬೇಧಿಸಿದ ಮಂಗಳೂರು ಉತ್ತರ ಠಾಣಾ ಪೊಲೀಸರು ಒಂದೇ ದಿನದಲ್ಲಿ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ಬಂಧಿತ ಆರೋಪಿಯನ್ನು ಮೂಲತಃ ಕಸಬಾ ಬೆಂಗ್ರೆ ನಿವಾಸಿ, ಪ್ರಸ್ತುತ ಜೆಪ್ಪು ಮಾರ್ಕೆಟ್ ಬಳಿಯ ನಿವಾಸಿ ಝಾಕೀರ್ ಹುಸೈನ್ ಅಲಿಯಾನ್ ಜಾಕಿ (38) ಎಂದು ಹೆಸರಿಸಲಾಗಿದೆ. ಬಂಧಿತ ಆರೋಪಿಯಿಂದ 70 ಸಾವಿರ ರೂಪಾಯಿ ನಗದು ಹಣ, ಕೃತ್ಯಕ್ಕೆ ಬಳಸಿದ ದ್ವಿಚಕ್ರ ವಾಹನ ಹಾಗೂ ವಿವೋ ಕಂಪೆನಿಯ ಮೊಬೈಲ್ ಫೋನನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಮಹಮ್ಮದ್ ನಿಜಾಮುದ್ದಿನ್ ಎಂಬವರು ಫೆ 7 ರಂದು ಶ್ರೀಧರ ಆಳ್ವ ಅವರಿಗೆ ಸೇರಿದ ಅಡಿಕೆಯನ್ನು ಕೆಎ19 ಎಇ8663 ನೋಂದಣಿ ಸಂಖ್ಯೆಯ ಇಂಟ್ರಾ ವಾಹನದಲ್ಲಿ ತುಂಬಿಸಿಕೊಂಡು ಬೀಬಿ ಅಲಾಬಿಯಲ್ಲಿರುವ ಅಂಬಾರ ಸುಪಾರಿ ಅಂಗಡಿಗೆ ಮಾರಾಟ ಮಾಡಿ ಅವರು ನೀಡಿದ 1,28,740/- ನಗದು ಹಣವನ್ನು ತನ್ನ ವಾಹನದ ಡ್ಯಾಶ್ ಬೋರ್ಡಿನಲ್ಲಿಟ್ಟು ವಾಹನವನ್ನು 10.30 ಗಂಟೆಗೆ ಬಂದರ್ ಜೆ ಎಂ ರಸ್ತೆಯಲ್ಲಿರುವ ಸದರ್ನ್ ಏಜೆನ್ಸಿಯಲ್ಲಿ ಎಸಿಪಿ ಶೀಟ್ ಖರೀದಿ ಮಾಡಿ ವಾಹನದಲ್ಲಿ ಕುಳಿತು ಡ್ಯಾಶ್ ಬೋರ್ಡ್ ತೆರೆದಾಗ ಅದರಲ್ಲಿಟ್ಟಿದ್ದ 1,28,740/- ರೂಪಾಯಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಈ ಬಗ್ಗೆ ಮಂಗಳೂರು ಉತ್ತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆರೋಪಿ ಹಾಗೂ ಸೊತ್ತು ಪತ್ತೆಗಾಗಿ ಮಂಗಳೂರು ಉತ್ತರ ಪೆÇಲೀಸ್ ಠಾಣಾ ಪೆÇಲೀಸ್ ಇನ್ಸ್ ಪೆಕ್ಟರ್ ಸಚಿನ್ ಕುಮಾರ್, ಪಿಎಸ್ಸೈ ಶೀತಲ್ ಅಲಗೂರು, ಎಎಸ್ಸೈಗಳಾದ ಶಶಿಧರ, ದಾಮೋದರ್ ಹಾಗೂ ಉತ್ತರ ಪೆÇಲೀಸ್ ಠಾಣಾ ಸಿಬ್ಬಂದಿಗಳನ್ನು ಒಳಗೊಂಡ ತಂಡ ಫೆ 8 ರಂದು ಆರೋಪಿಯನ್ನು ನಗರದ ಮಣ್ಣಗುಡ್ಡ ಜಂಕ್ಷನ್ ಬಳಿ ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ, ಆರೋಪಿತನ ವಿರುದ್ದ ಉಡುಪಿ ಜಿಲ್ಲೆಯ ಕುಂದಾಪುರ ಪೆÇಲೀಸ್ ಠಾಣೆಯಲ್ಲಿ ರಾತ್ರಿ ಮನೆ ಕಳವು ಪ್ರಕರಣದಲ್ಲಿ ಹಾಗೂ ಮಂಗಳೂರು ದಕ್ಷಿಣ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಟೋ ರಿಕ್ಷಾದ ಸೀಟಿನಲ್ಲಿಟ್ಟಿದ ನಗದು ಹಣ ಕಳವು ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.













0 comments:
Post a Comment