ಬಂಟ್ವಾಳ, ಮಾರ್ಚ್ 03, ಮಾರ್ಚ್, 2026 (ಕರಾವಳಿ ಟೈಮ್ಸ್) : ಬಂಟ್ವಾಳ ತಾಲೂಕು ಬಂಟರ ಸಂಘದ ಮಹಿಳಾ ವಿಭಾಗದ ವತಿಯಿಂದ ಮಂಗಳೂರು ಎ ಜೆ ಆಸ್ಪತ್ರೆ ಮತ್ತು ರಿಸರ್ಚ್ ಸೆಂಟರ್ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಮತ್ತು ಪಂಪ್ ವೆಲ್ ಎಂ ಐ ಒ ಕ್ಯಾನ್ಸರ್ ಸ್ಪೆಷಾಲಿಟಿ ಆಸ್ಪತ್ರೆ ಇವರಿಂದ ಕ್ಯಾನ್ಸರ್ ಬಗ್ಗೆ ಜಾಗೃತಿ ಹಾಗೂ ಅರಿವು ಕಾರ್ಯಕ್ರಮವು ಮಾರ್ಚ್ 1 ರಂದು ತುಂಬೆಯ ಬಂಟವಾಳದ ಬಂಟರ ಭವನದಲ್ಲಿ ನಡೆಯಿತು.
ಕ್ಯಾನ್ಸರ್ ತಜ್ಞೆ ಡಾ ದಿವ್ಯ ಜ್ಯೋತಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ವಾಳ ತಾಲೂಕು ಬಂಟರ ಸಂಘದ ಅಧ್ಯಕ್ಷ ಜಗನ್ನಾಥ ಚೌಟ ಅಧ್ಯಕ್ಷತೆ ವಹಿಸಿದ್ದರು. ಬಂಟರ ಸಂಘದ ಮಹಿಳಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಸುಜಾತಾ ಪಿ ರೈ, ಕ್ಯಾನ್ಸರ್ ಆಸ್ಪತ್ರೆಯ ನಿರ್ದೇಶಕ ಹಾಗೂ ಹಿರಿಯ ಕ್ಯಾನ್ಸರ್ ತಜ್ಞ ಡಾ ಸುರೇಶ್ ರಾವ್, ಎ ಜೆ ಆಸ್ಪತ್ರೆಯ ಅಸಿಸ್ಟೆಂಟ್ ಪ್ರೊಫೆಸರ್ ಡಾ ವಾಮನ ನಾಯಕ್ ಮೊದಲಾದವರು ಭಾಗವಹಿಸಿದ್ದರು.
ಶಿಬಿರದಲ್ಲಿ ಹೃದ್ರೋಗ ತಪಾಸಣೆ, ಎಲುಬು ಮತ್ತು ಕೀಲು ತಪಾಸಣೆ, ಸ್ತ್ರೀ ರೋಗ ತಪಾಸಣೆ, ಕ್ಯಾನ್ಸರ್ ತಪಾಸಣೆ, ದಂತ ತಪಾಸಣೆ, ಕಣ್ಣಿನ ಪರೀಕ್ಷೆ ಹಾಗೂ ಉಚಿತ ಕನ್ನಡಕ ವಿತರಣೆ, ಬಿಪಿ, ಶುಗರ್ ಹಾಗೂ ಸಾಮಾನ್ಯ ತಪಾಸಣೆಗಳನ್ನು ನಡೆಸಲಾಯಿತು.




















0 comments:
Post a Comment