ಶಿರಾಡಿ ಘಾಟ್ ಸಮೀಪ ಬಸ್-ಕಾರು ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ದಾರುಣ ಸಾವು - Karavali Times ಶಿರಾಡಿ ಘಾಟ್ ಸಮೀಪ ಬಸ್-ಕಾರು ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ದಾರುಣ ಸಾವು - Karavali Times

728x90

13 March 2026

ಶಿರಾಡಿ ಘಾಟ್ ಸಮೀಪ ಬಸ್-ಕಾರು ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ದಾರುಣ ಸಾವು

ಉಪ್ಪಿನಂಗಡಿ, ಮಾರ್ಚ್ 13, ಮಾರ್ಚ್, 2026 (ಕರಾವಳಿ ಟೈಮ್ಸ್) : ಕಾರು ಹಾಗೂ ಕೆ ಎಸ್ ಆರ್ ಟಿ ಸಿ ರಾಜಹಂಸ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ದಾರುಣವಾಗಿ ಮೃತಪಟ್ಟ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಘಾಟ್ ಸಮೀಪ ಶುಕ್ರವಾರ ಅಪರಾಹ್ನ ಸಂಭವಿಸಿದೆ. 

ಮೃತರನ್ನು ಕಾರು ಪ್ರಯಾಣಿಕರಾದ ಚಂದ್ರಶೇಖರ ಶಿಶಿಲ (57), ಜನಾರ್ದನ ಗೌಡ ಉಜಿರೆ (58) ಹಾಗೂ ಶ್ರೀಧರ ಗೌಡ ಮರಕಡ (61) ಎಂದು ಹೆಸರಿಸಲಾಗಿದೆ. ಕಾರಿನಲ್ಲಿ ಇನ್ನೋರ್ವ ಸುರೇಶ (58) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಶುಕ್ರವಾರ ಅಪರಾಹ್ನ ಸುಮಾರು 3.30ರ ವೇಳೆಗೆ ಹಾಸನದಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಧರ್ಮಸ್ಥಳದಿಂದ ತಿರುಪತಿಗೆ ಹೋಗುತ್ತಿದದ್ ರಾಜಹಂಸ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಶಿರಾಡಿ ಘಾಟ್ ಸಮೀಪ ಬಸ್-ಕಾರು ನಡುವೆ ಭೀಕರ ಅಪಘಾತ : ಮೂವರು ಸ್ಥಳದಲ್ಲೇ ದಾರುಣ ಸಾವು Rating: 5 Reviewed By: karavali Times
Scroll to Top