ಕೆ.ಎಸ್.ಆರ್.ಟಿ.ಸಿ. ಬಸ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ಪಾವತಿ - Karavali Times ಕೆ.ಎಸ್.ಆರ್.ಟಿ.ಸಿ. ಬಸ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ಪಾವತಿ - Karavali Times

728x90

2 March 2026

ಕೆ.ಎಸ್.ಆರ್.ಟಿ.ಸಿ. ಬಸ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ಪಾವತಿ

ಮಂಗಳೂರು, ಮಾರ್ಚ್ 03, 2026 (ಕರಾವಳಿ ಟೈಮ್ಸ್) : ಕೆ.ಎಸ್.ಆರ್.ಟಿ.ಸಿ ಬಸ್ ಅಪಘಾತದಲ್ಲಿ ಸಾವನ್ನಪ್ಪಿದ  ವ್ಯಕ್ತಿಯ ಕುಟುಂಬಕ್ಕೆ ನಿಗಮದ ವತಿಯಿಂದ 10 ಲಕ್ಷ ರೂಪಾಯಿಗಳ ಪರಿಹಾರ ಪಾವತಿಸಲಾಗಿದೆ. 

2025ರ ಆಗಸ್ಟ್ 15 ರಂದು ಮಂಗಳೂರು- 1ನೇ ಘಟಕದ ಬಸ್ ಅಮೀನಗಡ-ಮಂಗಳೂರು ಮಾರ್ಗದಲ್ಲಿ ಕಾರ್ಯಾಚರಿಸುತ್ತಿದ್ದಾಗ ಯಲ್ಲಾಪುರ ಹಿಟ್ಟಿನಬೈಲ್ ಹತ್ತಿರ ಲಾರಿಯ ಹಿಂಭಾಗಕ್ಕೆ  ಬಸ್ ಢಿಕ್ಕಿಯಾಗಿ ಮಾರಣಾಂತಿಕ ಅಪಘಾತವಾಗಿತ್ತು. ಅಪಘಾತದಲ್ಲಿ ಬಾಗಲಕೋಟೆ ಹುನಗುಂದ ತಾಲೂಕಿನ ಹಿರೇಮಾಗಿ ನಿವಾಸಿ ಹನಮಪ್ಪ ಯಲ್ಲಪ್ಪ ಹೊಸೂರ (48) ಎಂಬವರು ಮೃತಪಟ್ಟಿದ್ದರು.

ಮೃತರ ಪತ್ನಿ ಕಮಲವ್ವ ಮತ್ತು ಕುಟುಂಬಸ್ಥರಿಗೆ ಸಂಸ್ಥೆಯ ನಿಯಮಾವಳಿಯಂತೆ ಅಪಘಾತ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಪರಿಹಾರದ ಚೆಕ್ಕನ್ನು ಕೆ.ಎಸ್.ಆರ್.ಟಿ.ಸಿ ಮಂಗಳೂರು ವಿಭಾಗದ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ ಶೆಟ್ಟಿ ಹಸ್ತಾಂತರಿಸಿದರು. 

ಈ ಸಂದರ್ಭ ಮಂಗಳೂರು ವಿಭಾಗದ ವಿಭಾಗೀಯ ಸಂಚಾರ ಅಧಿಕಾರಿ ಎಚ್.ಆರ್. ಕಮಲ್ ಕುಮಾರ್ ಸಹಿತ ಅಧಿಕಾರಿಗಳು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಕೆ.ಎಸ್.ಆರ್.ಟಿ.ಸಿ. ಬಸ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ಪಾವತಿ Rating: 5 Reviewed By: karavali Times
Scroll to Top