ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಗದಿತ ಸ್ಥಳಗಳಿಗೆ ಪ್ರವೇಶಿಸದ ಸಿಟಿ ಬಸ್ಸುಗಳು : ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಕಾಮತ್, ಸೂಕ್ತ ಕ್ರಮದ ಭರವಸೆ ನೀಡಿದ ಸಚಿವ ರೆಡ್ಡಿ - Karavali Times ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಗದಿತ ಸ್ಥಳಗಳಿಗೆ ಪ್ರವೇಶಿಸದ ಸಿಟಿ ಬಸ್ಸುಗಳು : ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಕಾಮತ್, ಸೂಕ್ತ ಕ್ರಮದ ಭರವಸೆ ನೀಡಿದ ಸಚಿವ ರೆಡ್ಡಿ - Karavali Times

728x90

24 March 2026

ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಗದಿತ ಸ್ಥಳಗಳಿಗೆ ಪ್ರವೇಶಿಸದ ಸಿಟಿ ಬಸ್ಸುಗಳು : ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಕಾಮತ್, ಸೂಕ್ತ ಕ್ರಮದ ಭರವಸೆ ನೀಡಿದ ಸಚಿವ ರೆಡ್ಡಿ

ಮಂಗಳೂರು, ಮಾರ್ಚ್ 24, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರ ವ್ಯಾಪ್ತಿಯಲ್ಲಿ ಅನೇಕ ಸಿಟಿ ಬಸ್ಸುಗಳು ನಿಗದಿತ ಸ್ಥಳಕ್ಕೆ ಹೋಗದಿರುವುದರಿಂದ ಸಾರ್ವಜನಿಕರು ತೀವ್ರ ಸಮಸ್ಯೆ ಅನುಭವಿಸುತ್ತಿದ್ದು ಇದಕ್ಕೆ ಕೂಡಲೇ ಕಡಿವಾಣ ಹಾಕಬೇಕೆಂದು ಅಧಿವೇಶನದಲ್ಲಿ ಶಾಸಕ ವೇದವ್ಯಾಸ ಕಾಮತ್ ಆಗ್ರಹಿಸಿದರು.

ನಗರದ ಕೆಲವು ಸಿಟಿ ಬಸ್ಸುಗಳು ಆರ್ಥಿಕ ಕಾರಣ ನೀಡಿ ಒಂದಷ್ಟು ಪ್ರದೇಶಗಳಿಗೆ ಸೇವೆಯನ್ನು ಸೀಮಿತಗೊಳಿಸುವುದು, ಟ್ರಿಪ್ ಕಡಿತಗೊಳಿಸುವುದು ಮೊದಲಾದ ಕಾರಣಗಳಿಗೆ ಅಲ್ಲಿ ಸರ್ಕಾರಿ ಬಸ್ಸುಗಳನ್ನು ಹಾಕಲಾಗಿತ್ತು. ಆದರೆ ನಂತರ ಅವುಗಳನ್ನೂ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಶಕ್ತಿನಗರ, ಬಜಾಲ್-ಪಡ್ಪು-ಕೊಟ್ಟಾರ, ಪಡೀಲ್-ಕಣ್ಣಗುಡ್ಡೆ, ಬೋಳೂರು ಮಾತಾ ಅಮೃತಾನಂದಮಯಿನಿಂದ ರೈಲ್ವೆ ಸ್ಟೇಷನ್, ಜಲ್ಲಿಗುಡ್ಡೆ, ಸರಿಪಲ್ಲ ಮೊದಲಾದ ಭಾಗದ ಜನರು ಸೂಕ್ತ ಸಾರಿಗೆ ವ್ಯವಸ್ಥೆಯಿಲ್ಲದೇ ಪರಿತಪಿಸುವಂತಾಗಿದೆ ಎಂದರು.

ಈ ಬಗ್ಗೆ ದ.ಕ ಬಸ್ ಮಾಲಕರ ಸಂಘ, ಆರ್.ಟಿ.ಒ, ಪೆÇಲೀಸ್ ಇಲಾಖೆ, ಜಿಲ್ಲಾಧಿಕಾರಿ, ಕೊನೆಗೆ ಉಸ್ತುವಾರಿ ಸಚಿವರಿದ್ದ ಕೆಡಿಪಿ ಸಭೆ ಹೀಗೆ ಎಲ್ಲರ ಗಮನಕ್ಕೂ ತಂದಾಗ ಒಂದೆರಡು ದಿನ ಸಮಸ್ಯೆ ಬಗೆಹರಿದಂತೆ ಕಂಡರೂ ಅಂತಿಮ ಫಲಿತಾಂಶ ಮಾತ್ರ ಶೂನ್ಯ. ಹೀಗಾಗಿ ಅಧಿವೇಶನದಲ್ಲಿಯೇ ಪ್ರಸ್ತಾಪಿಸುತ್ತಿದ್ದು ದಯವಿಟ್ಟು ಸಾರ್ವಜನಿಕರ ಸಮಸ್ಯೆಗೆ ಮುಕ್ತಿ ನೀಡಿ ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ನಗರ ವ್ಯಾಪ್ತಿಯಲ್ಲಿ ನಿಗದಿತ ಸ್ಥಳಗಳಿಗೆ ಪ್ರವೇಶಿಸದ ಸಿಟಿ ಬಸ್ಸುಗಳು : ಸದನದಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ಕಾಮತ್, ಸೂಕ್ತ ಕ್ರಮದ ಭರವಸೆ ನೀಡಿದ ಸಚಿವ ರೆಡ್ಡಿ Rating: 5 Reviewed By: karavali Times
Scroll to Top