ಮಂಗಳೂರು, ಮಾರ್ಚ್ 31, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೊಲೀಸ್, ದ ಕ ಜಿಲ್ಲಾ ಪೊಲೀಸ್, ವಿಶೇಷ ಕಾರ್ಯಪಡೆ ಘಟಕ ಮತ್ತು ಕೆ ಎಸ್ ಆರ್ ಪಿ 7ನೇ ಪಡೆ, ಮಂಗಳೂರು ಘಟಕಗಳ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಧ್ವಜ ಹಾಗೂ ಕಲ್ಯಾಣ ದಿನಾಚರಣೆಯನ್ನು ಎಪ್ರಿಲ್ 2 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಡಿ.ಎ.ಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಆಚರಿಸಲಾಗುತ್ತದೆ.
ನಿವೃತ್ತ ಪೊಲೀಸ್ ನಿರೀಕ್ಷಕ ಮೋಹನ್ ಕೊಟ್ಟಾರಿ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ ಅಮಿತ್ ಸಿಂಗ್ ಅಧ್ಯಕ್ಷತೆ ವಹಿಸಲಿದ್ದಾರೆ.











0 comments:
Post a Comment