ಮಂಗಳೂರು, ಮಾರ್ಚ್ 24, 2026 (ಕರಾವಳಿ ಟೈಮ್ಸ್) : ಕಾಪಿ ರೈಟ್ ಪ್ರಕರಣದಲ್ಲಿ ಸುಮಾರು 17 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬರ್ಕೆ ಠಾಣಾ ಪೊಲೀರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದೇರಳಕಟ್ಟೆ-ನಾಟೆಕಲ್ ನಿವಾಸಿ ರಿಯಾಜ್ ಎಂದು ಹೆಸರಿಸಲಾಗಿದೆ. ಬರ್ಕೆ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 15/2009 ಕಲಂ 52(ಎ),63 ಕಾಪಿ ರೈಟ್ ಕಾಯ್ದೆ ಪ್ರಕರಣದಲ್ಲಿ ಆರೋಪಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದು, ನ್ಯಾಯಾಲಯವು 2016ರಲ್ಲಿ ಸದ್ರಿ ಪ್ರಕರಣವನ್ನು ಎಲ್ ಪಿ ಸಿ 79/2016 ಪ್ರಕರಣವಾಗಿ ಪರಿವರ್ತಿಸಿದೆ. ಪ್ರಕರಣದಲ್ಲಿ ಸುಮಾರು 17 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿ ರಿಯಾಜ್ ಎಂಬಾತನನ್ನು ಮಾರ್ಚ್ 24 ರಂದು ಬರ್ಕೆ ಪೆÇಲೀಸ್ ಠಾಣಾ ಅಧಿಕಾರಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.











0 comments:
Post a Comment