ಬಂಟ್ವಾಳ, ಮಾರ್ಚ್ 28, ಮಾರ್ಚ್, 2026 (ಕರಾವಳಿ ಟೈಮ್ಸ್) : ಕಳ್ಳತನ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ, ಕೇರಳ ರಾಜ್ಯದ ಪಾಲಕ್ಕಾಡ್ ನಿವಾಸಿ ಶಕೀಲ್ ಪಿ (43) ಎಂಬಾತನನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಕೇರಳದ ತಿರೂರ್ ಎಂಬಲ್ಲಿಂದ ಮಾರ್ಚ್ 27 ರಂದು ದಸ್ತಗಿರಿ ಮಾಡುವಲ್ಲಿ ಸಫಲರಾಗಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಕ್ರಮಾಂಕ 152/2017 ಕಲಂ 379 ಆರ್/ಡಬ್ಲ್ಯು 34 ಐಪಿಸಿ ಪ್ರಕರಣದಲ್ಲಿ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸಂತೋಷ್, ಶಿವಾನಂದ ಮಡ್ಡಿ ಅವರು ಮಾಹಿತಿ ಸಂಗ್ರಹಿಸಿ ಕೇರಳದ ತಿರೂರು ಎಂಬಲ್ಲಿ ಮಾರ್ಚ್ 27 ರಂದು ದಸ್ತಗಿರಿ ಮಾಡಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.











0 comments:
Post a Comment