ಬಂಟ್ವಾಳ, ಎಪ್ರಿಲ್ 02, 2026 (ಕರಾವಳಿ ಟೈಮ್ಸ್) : ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಚಾರ ಸಮಿತಿ ಅಧ್ಯಕ್ಷ ಎ ಬಿ ಅಬ್ದುಲ್ಲಾ ಕೊಳ್ನಾಡು ಅವರು ಕೇರಳ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಗಡಿ ಪ್ರದೇಶವಾದ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಯುಡಿಎಫ್ ಮೈತ್ರಿಕೂಟದ ಅಭ್ಯರ್ಥಿ ಎ ಕೆ ಎಂ ಅಶ್ರಫ್ ಅವರ ಪರವಾಗಿ ಕ್ಷೇತ್ರದ ವಿವಿಧೆಡೆ ಮತ ಪ್ರಚಾರ ಕೈಗೊಂಡರು.
ಕ್ಷೇತ್ರ ವ್ಯಾಪ್ತಿಯ ತಲೆಕ್ಕಿ, ಬಾಕ್ರಬೈಲು, ಪಾತೂರು ಮೊದಲಾದೆಡೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರ ಜೊತೆ ಬಿರುಸಿನ ಪ್ರಚಾರ ಕೈಗೊಂಡ ಅವರು ಕೇರಳದಲ್ಲಿ ಈ ಬಾರಿ ಯುಡಿಎಫ್ ಹವಾ ಇದ್ದು, ಮೈತ್ರಿಕೂಟದ ಅಭ್ಯರ್ಥಿಯನ್ನು ಅತ್ಯಧಿಕ ಮತಗಳಿಂದ ಚುನಾಯಿಸುವಂತೆ ಮನವಿ ಮಾಡಿಕೊಂಡರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ ಸಹಿತ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.


















0 comments:
Post a Comment