ಬಂಟ್ವಾಳ, ಎಪ್ರಿಲ್ 09, 2026 (ಕರಾವಳಿ ಟೈಮ್ಸ್) : ಮಾಣಿ ಸಮೀಪದ ನೇರಳಕಟ್ಟೆ ನಿವಾಸಿ ಅಬ್ದುಲ್ಲಾ ಯೂಸುಫ್ ಹಾಜಿ ಯಾನೆ ಪುತ್ತುಬ್ಬ ಹಾಜಿ (67) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಕೊಡಾಜೆ ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರ ಸಹಿತ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.


















0 comments:
Post a Comment