ಮಂಗಳೂರು, ಎಪ್ರಿಲ್ 16, 2026 (ಕರಾವಳಿ ಟೈಮ್ಸ್) : ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ಯ್ವರು ಎಪ್ರಿಲ್ 18 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಎಪ್ರಿಲ್ 18 ರಂದು ಬೆಳಿಗ್ಗೆ 8.15ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಚಿವರು, ನಂತರ ಮಹಾತ್ಮಗಾಂಧಿ ನಗರಾಭಿವೃದ್ಧಿ 2ನೇ ಹಂತದ ಯೋಜನೆಯಡಿ ರಾಜ್ಯ ಸರ್ಕಾರದಿಂದ ಮಂಗಳೂರು ಮಹಾನಗರಪಾಲಿಕೆಯ ವಿವಿಧ ಕಾಮಗಾರಿಗಳಿಗೆ ಮಂಜೂರಾದ ಯೋಜನೆಗಳಿಗೆ ಶಿಲಾನ್ಯಾಸ ಸಮಾರಂಭದಲ್ಲಿ ಭಾಗವಹಿಸಲಿದ್ದು, ಬೆಳಿಗ್ಗೆ 9 ಗಂಟೆಗೆ ಮರವೂರು ಸೇತುವೆ ಬಳಿ, 9.45ಕ್ಕೆ ವೆಲೆನ್ಸಿಯಾ ಚರ್ಚ್ ಬಳಿ, 10.30ಕ್ಕೆ ಸುಂಕದಕಟ್ಟೆ ಉರ್ವಸ್ಟೋರ್, ಬೆಳಿಗ್ಗೆ 10.45ಕ್ಕೆ ಚಿಲಿಂಬಿಗುಡ್ಡ, 11ಕ್ಕೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಸಭಾ ಕಾರ್ಯಕ್ರಮ, ಮಧ್ಯಾಹ್ನ 2.30ಕ್ಕೆ ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವರು ಭಾಗವಹಿಸುವರು. ರಾತ್ರಿ 10.40ಕ್ಕೆ ಸಚಿವರು ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.











0 comments:
Post a Comment