ಬಂಟ್ವಾಳ, ಜೂನ್ 13, 2026 (ಕರಾವಳಿ ಟೈಮ್ಸ್) : ಬಂಟ್ವಾಳ ಗ್ರಾಮಾಂತರ ಠಾಣಾ ಅಪರಾಧ ಕ್ರಮಾಂಕ 309/2017, ಕಲಂ 8(ಸಿ) 27 ಎನ್ ಡಿ ಪಿ ಎಸ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ನಿವಾಸಿ ನಜೀರ್ ಅಹ್ಮದ್ (41) ಎಂಬಾತನ ಇರುವಿಕೆಯ ಬಗ್ಗೆ ಜೂನ್ 12 ರಂದು ವಗ್ಗ ಎಂಬಲ್ಲಿ ಪತ್ತೆ ಹಚ್ಚಿದ ಬಂಟ್ವಾಳ ಗ್ರಾಮಾಂತರ ಠಾಣಾ ಸಿಬ್ಬಂದಿಗಳಾದ ಶ್ರೀಕಾಂತ ಹಾಗೂ ಅರುಣ್ ಅವರು ಆತನನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
12 June 2026
- Blogger Comments
- Facebook Comments
Subscribe to:
Post Comments (Atom)













0 comments:
Post a Comment