ಮಂಗಳೂರು, ಜೂನ್ 25, 2026 (ಕರಾವಳಿ ಟೈಮ್ಸ್) : ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜೂನ್ 23 ರಂದು ನಿಷೇಧಿತ ಎಂಡಿಎಂ ಮಾರಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣ ಬೇಧಿಸಿದ ಸಿಸಿಬಿ ಪೊಲೀಸ್ ಅಧಿಕಾರಿಗಳು ಮೂವರು ಖದೀಮರನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬೆಂಗಳೂರು-ಹಲಸೂರು ನಿವಾಸಿ ನಿವಾಸಿ ದಿವಂಗತ ಮೊಹಮ್ಮದ್ ಫಕ್ರುದ್ದೀನ್ ಎಂಬವರ ಪುತ್ರ ಮೊಹಮ್ಮದ್ ನದೀಮ್ (27), ಉಚ್ಚಿಲ ಸೋಮೇಶ್ವರ ಪೆರಿಬೈಲು ನಿವಾಸಿ ಪಿ ಎಂ ಅಬ್ಬಾಸ್ ಎಂಬವ ಪುತ್ರ ಉಮ್ಮರ್ ಫಾರೂಕ್ (30) ಕೆ ಸಿ ರೋಡು ಸಮೀಪದ ಕಿನ್ಯ-ಕುತುಬಿ ನಗರ ನಿವಾಸಿ ಕೆ ಐ ಇಸ್ಮಾಯಿಲ್ ಎಂಬವರ ಪುತ್ರ ಇಂತಿಯಾಝ್ ಇಸ್ಮಾಯಿಲ್ (41) ಎಂದು ಹೆಸರಿಸಲಾಗಿದೆ.
ಬಂಧಿತ ಆರೋಪಿಗಳಿಂದ 35.53 ಗ್ರಾಂ ಎಂಡಿಎಂಎ ಹಾಗೂ 7,030/- ರೂಪಾಯಿ ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂನ್ 23 ರಂದು ನಗರದ ಬೆಂದೂರ್ ನಲ್ಲಿರುವ ಲಾಡ್ಜ್ ಒಂದರಲ್ಲಿ ಆರೋಪಿಗಳು ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸ್ ಅಧಿಕಾರಿಗಳು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿ ಈ ಕಾರ್ಯಾಚರಣೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿಗಳನ್ನು ಮಂಗಳೂರು ಪೂರ್ವ ಪೆÇಲೀಸ್ ಠಾಣೆಗೆ ಹಸ್ತಾಂತರಿಸಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಜೂನ್ 24 ರಂದು ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ. ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


















0 comments:
Post a Comment