ಧರ್ಮಸ್ಥಳ, ಜೂನ್ 10, 2026 (ಕರಾವಳಿ ಟೈಮ್ಸ್) : ಧರ್ಮಸ್ಥಳ ಠಾಣಾ ವ್ಯಾಪ್ತಿಯ ನಿವಾಸಿಯಾದ ಸಂತ್ರಸ್ಥ ಮಹಿಳೆಯು 2023ರಲ್ಲಿ ರಾತ್ರಿ ವೇಳೆ, ತನ್ನ ಮನೆಯಲ್ಲಿ ಒಬ್ಬಳೇ ಇರುವಾಗ, ಸದ್ರಿಯವರ ಸಂಬಂಧಿಕನಾದ ಆರೋಪಿ ಸುರೇಶ್ ಎಂಬಾತ ಮನೆಗೆ ಬಂದು ಸಂತ್ರಸ್ಥ ಮಹಿಳೆಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿರುವುದಾಗಿ ಜೂನ್ 7 ರಂದು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 41/2026, ಕಲಂ 376, 506 ಐಪಿಸಿಯಂತೆ ಪ್ರಕರಣ ದಾಖಲಾಗಿರುತ್ತದೆ.
ಪ್ರಕರಣದ ತನಿಖೆ ನಡೆಸಿದ ಪೊಲೀಸರು ಜೂನ್ 9 ರಂದು ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.













0 comments:
Post a Comment