ಉಪ್ಪಿನಂಗಡಿ, ಜೂನ್ 27, 2026 (ಕರಾವಳಿ ಟೈಮ್ಸ್) : ಉಪ್ಪಿನಂಗಡಿ ಠಾಣಾ ಅಪರಾಧ ಕ್ರಮಾಂಕ 09/2005, ಕಲಂ 457, 380 ಆರ್/ಡಬ್ಲ್ಯು 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾದ ತಮಿಳುನಾಡು ತಿರುಣವೇಲಿ ನಿವಾಸಿ ಮಾಡ ಸ್ವಾಮಿ ಎಂಬಾತ ಕಳೆದ ಸುಮಾರು 16 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ಈತನನ್ನು ಉಪ್ಪಿನಂಗಡಿ ಠಾಣಾ ಪೊಲೀಸರು ಕೃಷ್ಣ ನಗರ ಎಂಬಲ್ಲಿ ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
27 June 2026
- Blogger Comments
- Facebook Comments
Subscribe to:
Post Comments (Atom)















0 comments:
Post a Comment