ಗೃಹರಕ್ಷಕದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ತಂಡದಿಂದ ಪೂರ್ವಸಿದ್ದತೆ - Karavali Times ಗೃಹರಕ್ಷಕದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ತಂಡದಿಂದ ಪೂರ್ವಸಿದ್ದತೆ - Karavali Times

728x90

10 June 2026

ಗೃಹರಕ್ಷಕದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ತಂಡದಿಂದ ಪೂರ್ವಸಿದ್ದತೆ

ಮಂಗಳೂರು, ಜೂನ್ 10, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕದಳ ಕಛೇರಿಯಲ್ಲಿ  ಪ್ರವಾಹ ರಕ್ಷಣಾ ತಂಡಗಳ ಪೂರ್ವಸಿದ್ಧತೆ ನಡೆಯಿತು. ಈ ಸಂದರ್ಭದಲ್ಲಿ ಜಿಲ್ಲಾ ಸಮಾದೇಷ್ಟ ಮತ್ತು ಹೆಚ್ಚುವರಿ ಪೆÇಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್. ಬೂಮರಡ್ಡಿ ಅವರು ಪ್ರವಾಹ ರಕ್ಷಣಾ ತಂಡದ ಸಾಮಾಗ್ರಿಗಳಾದ ಫೈಬರ್ ಬೋಟ್, ಲೈಫ್ ಜಾಕೆಟ್, ಲೈಫ್ ಬಾಯ್ ಮತ್ತು ಹಗ್ಗಗಳನ್ನು ಪರೀಕ್ಷಿಸಿ ಪ್ರವಾಹ ರಕ್ಷಣಾ ತಂಡವನ್ನು ಸಿದ್ಧಪಡಿಸಿ, ಪ್ರವಾಹ ರಕ್ಷಣಾ ತಂಡದ ಸದಸ್ಯರುಗಳಿಗೆ ಪ್ರವಾಹ ಸಂದರ್ಭದಲ್ಲಿ ರಕ್ಷಣಾ ಕಾರ್ಯವನ್ನು ಮಾಡುವ ಕುರಿತು ಮಾರ್ಗದರ್ಶನ ನೀಡಿದರು. ಸಾರ್ವಜನಿಕರಿಂದ ತುರ್ತು ಕರೆ ಬಂದಾಗ ಕರ್ತವ್ಯಕ್ಕೆ ಸನ್ನದ್ಧರಾಗಿರುವಂತೆ ರಕ್ಷಣಾ ತಂಡದ ಸದಸ್ಯರುಗಳಿಗೆ ಸೂಚನೆ ನೀಡಿದರು.  

ಕೇಂದ್ರ ಕಛೇರಿಯಿಂದ ನೀಡಲಾದ ಬೋಟ್ ಗಳನ್ನು ಹಾಗೂ ಪ್ರವಾಹ ರಕ್ಷಣಾ ಸಾಮಗ್ರಿಗಳನ್ನು ಈಗಾಗಲೇ ಘಟಕಗಳ ಘಟಕಾಧಿಕಾರಿ/ ಪ್ರಭಾರ ಘಟಕಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭ ಸಹಾಯಕ ಆಡಳಿತಾಧಿಕಾರಿ ಕವಿತಾ ಕೆ.ಸಿ., ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಎ., ವಿಶ್ವನಾಥ ಎಂ, ಸಹಾಯಕ ಬೋಧಕ ಸುನಿಲ್ ಮುಗಳ್‍ಕೋಡ್, ಮಂಗಳೂರು ಘಟಕದ ಘಟಕಾಧಿಕಾರಿ ಸುನಿಲ್ ಕುಮಾರ್ ಮತ್ತು ಗೃಹರಕ್ಷಕರಾದ ಧನಂಜಯ, ಕೇಶವ ಶೆಟ್ಟಿಗಾರ್, ಜ್ಞಾನೇಶ್ ಕೋಟ್ಯಾನ್, ದಿನೇಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಗೃಹರಕ್ಷಕದಳ ಕಚೇರಿಯಲ್ಲಿ ಪ್ರವಾಹ ರಕ್ಷಣಾ ತಂಡದಿಂದ ಪೂರ್ವಸಿದ್ದತೆ Rating: 5 Reviewed By: karavali Times
Scroll to Top