ಮಂಗಳೂರು, ಜುಲೈ 23, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯಲ್ಲಿ ಸಂಚಾರ ನಿಯಮಗಳ ಉಲ್ಲಂಘನೆಗಳಿಂದಾಗಿ ನಡೆಯುವ ರಸ್ತೆ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖ ಸ್ಥಳಗಳಲ್ಲಿ ಕ್ಯಾಮೆರಾ ಅಳವಡಿಸಲಾಗುತ್ತಿದೆ. ಮೊದಲ ಹಂತವಾಗಿ ವಿಟ್ಲ ಪೆÇಲೀಸ್ ಠಾಣೆ, ಉಪ್ಪಿನಂಗಡಿ ಪೆÇಲೀಸ್ ಠಾಣೆ, ಸುಳ್ಯ ಪೆÇಲೀಸ್ ಠಾಣೆ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ಸ್ಥಳಗಳಲ್ಲಿ ಕ್ಯಾಮರಾಗಳನ್ನು ಅಳವಡಿಸಲಾಗಿದ್ದು, ಜುಲೈ 23 ರಿಂದ ಕಾರ್ಯರಂಭಗೊಂಡಿದೆ. ಸದ್ರಿ ಕ್ಯಾಮರಾಗಳ ಮೂಲಕ ಸಂಚಾರ ನಿಯಮಗಳ ಉಲ್ಲಂಘನೆಗಳನ್ನು ಪತ್ತೆಮಾಡಿ, ಸಂಬಂಧಪಟ್ಟ ವಾಹನ ಮಾಲಕರಿಗೆ ನೋಟೀಸ್ ನೀಡಲಾಗುವುದು ಎಂದು ಜಿಲ್ಲಾ ಎಸ್ಪಿ ಮಾಹಿತಿ ನೀಡಿದ್ದಾರೆ.
23 July 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment