ಮಂಗಳೂರು, ಜುಲೈ 03, 2026 (ಕರಾವಳಿ ಟೈಮ್ಸ್) : ಕಂಟೈನರ್ ಲಾರಿ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಮಂಗಳೂರು-ಉಡುಪಿ ರಸ್ತೆಯ ಕೂಳೂರು ವಿ ಆರ್ ಎಲ್ ಕಚೇರಿ ಎದುರು ಜುಲೈ 3 ರಂದು ಸಂಜೆ ಸಂಭವಿಸಿದೆ.
ಮೃತ ಸ್ಕೂಟರ್ ಸವಾರನನ್ನು ಸದಾನಂದ ಶೆಟ್ಟಿಗಾರ್ (46) ಎಂದು ಹೆಸರಿಸಲಾಗಿದೆ. ಇವರು ತನ್ನ ಸ್ಕೂಟರಿನಲ್ಲಿ ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿರುವಾಗ ಅದೇ ರಸ್ತೆಯಲ್ಲಿ ಮಹಮ್ಮದ್ ಅಝರುದ್ದೀನ್ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಕಂಟೈನರ್ ಲಾರಿ ಡಿಕ್ಕಿ ಹೊಡೆದು ಈ ಭೀಕರ ಅಪಘಾತ ಸಂಭವಿಸಿದೆ. ಕಂಟೈನರ್ ಲಾರಿ ಸ್ಕೂಟರ್ ಸವಾರನ ಮೇಲೆ ಹರಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂಟೈನರ್ ಚಾಲಕನ ನಿರ್ಲಕ್ಷ್ಯ ಹಾಗೂ ದುಡುಕುತನದ ಚಾಲನೆಯೇ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗಿದೆ.















0 comments:
Post a Comment