ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ರೈಂ ಕಂಟ್ರೋಲ್ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 29 ಪೊಲೀಸ್ ಅಧಿಕಾರಿಗಳು ಹಾಗೂ 118 ಸಿಬ್ಬಂದಿಗಳಿಗೆ ಕಮಿಷನರ್ ಗೌರವ - Karavali Times ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ರೈಂ ಕಂಟ್ರೋಲ್ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 29 ಪೊಲೀಸ್ ಅಧಿಕಾರಿಗಳು ಹಾಗೂ 118 ಸಿಬ್ಬಂದಿಗಳಿಗೆ ಕಮಿಷನರ್ ಗೌರವ - Karavali Times

728x90

20 July 2026

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ರೈಂ ಕಂಟ್ರೋಲ್ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 29 ಪೊಲೀಸ್ ಅಧಿಕಾರಿಗಳು ಹಾಗೂ 118 ಸಿಬ್ಬಂದಿಗಳಿಗೆ ಕಮಿಷನರ್ ಗೌರವ

ಮಂಗಳೂರು, ಜುಲೈ 20, 2026 (ಕರಾವಳಿ ಟೈಮ್ಸ್) : ಮಂಗಳೂರು ನಗರ ಪೆÇಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಳೆದ ಆರು ತಿಂಗಳ ಅವಧಿಯಲ್ಲಿ ವಿವಿಧ ಠಾಣೆಗಳ ಅಪರಾಧ ಪ್ರಕರಣಗಳ ಪತ್ತೆ ಕಾರ್ಯ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮವಾಗಿ ಕರ್ತವ್ಯ ನಿರ್ವಹಿಸಿ ಕಾರ್ಯದಕ್ಷತೆಯನ್ನು ಮೆರೆದ ಪೆÇಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಗುರುತಿಸಿ ಜುಲೈ 20 ರಂದು ಪೆÇಲೀಸ್ ಆಯುಕ್ತರು 29 ಪೆÇಲೀಸ್ ಅಧಿಕಾರಿಗಳಿಗೆ ಪ್ರಶಂಸನಾ ಪತ್ರ ಹಾಗೂ 118 ಸಿಬ್ಬಂದಿಗೆ ನಗದು ಬಹುಮಾನ ಮತ್ತು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು.

ಕಳೆದ ಆರು ತಿಂಗಳ ಅವಧಿಯಲ್ಲಿ 24 ಎಲ್.ಪಿ.ಸಿ. (ಲಾಂಗ್ ಪೆಂಡಿಂಗ್ ಕೇಸಸ್) ಪ್ರಕರಣಗಳ ಆರೋಪಿಗಳನ್ನು ಬಂಧಿಸಲಾಗಿದ್ದು, ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಎನ್.ಬಿ.ಡಬ್ಲ್ಯು. ವಾರಂಟ್ ಹೊಂದಿದ್ದ ಆರೋಪಿಗಳನ್ನು ಯಶಸ್ವಿಯಾಗಿ ಪತ್ತೆಹಚ್ಚಲಾಗಿದೆ.

2026ನೇ ಸಾಲಿನಲ್ಲಿ ಸೊತ್ತು ಕಳವು ಪ್ರಕರಣಗಳ ಪೈಕಿ 88 ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವುದರೊಂದಿಗೆ, ಸುಮಾರು 1 ಕೋಟಿ 20 ಲಕ್ಷ ಮೌಲ್ಯದ ಕಳವಾದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಟದಲ್ಲಿ ತೊಡಗಿದ್ದ ಪೆಡ್ಲರ್ ಗಳ ವಿರುದ್ಧ 84 ಪ್ರಕರಣಗಳನ್ನು ದಾಖಲಿಸಿ, 142 ಆರೋಪಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಮಾದಕ ವಸ್ತು ಸೇವನೆಗೆ ಸಂಬಂಧಿಸಿದಂತೆ 346 ಪ್ರಕರಣಗಳನ್ನು ದಾಖಲಿಸಿ 443 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ಅವರಿಂದ ಪೆಡ್ಲರ್ ಗಳ ಕುರಿತು ಮಾಹಿತಿ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

ಸೈಬರ್ ಅಪರಾಧಗಳು ನಡೆಯದಂತೆ ಕಾಲಕಾಲಕ್ಕೆ ನಗರ ವ್ಯಾಪ್ತಿಯಲ್ಲಿ ಜಾಗೃತಿ ಹಾಗೂ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದರ ಪರಿಣಾಮವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿ, ಪ್ರಸ್ತುತ ಸಾಲಿನಲ್ಲಿ ಸೈಬರ್ ವಂಚನೆ ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆ ಕಂಡುಬಂದಿದೆ. ಸೈಬರ್ ವಂಚನೆ ನಡೆದ ತಕ್ಷಣ 1930 ಸಹಾಯವಾಣಿಗೆ ಕರೆ ಮಾಡುವ ಮೂಲಕ ತ್ವರಿತ ಕ್ರಮ ಕೈಗೊಂಡು, ವಂಚನೆಗೊಳಗಾದ ಹಣವನ್ನು ಮರುಪಡೆಯಲು ಅಗತ್ಯ ಕ್ರಮಗಳನ್ನು ಕೈಗೊಂಡಿರುವ  ಪೆÇಲೀಸ್ ಅಧಿಕಾರಿ/ ಸಿಬ್ಬಂದಿಗಳನ್ನು ಗೌರವಿಸಲಾಯಿತು. 

ಅದೇ ರೀತಿ ಸೈಬರ್ ಅಪರಾಧಗಳ ಪತ್ತೆ ಕಾರ್ಯದಲ್ಲಿಯೂ ಗಮನಾರ್ಹ ಸಾಧನೆ ಮಾಡಲಾಗಿದ್ದ ಅಧಿಕಾರಿ ಸಿಬ್ಬಂದಿಗಳನ್ನು ಗೌರವಿಸಲಾಯಿತು. ಮುಖ್ಯವಾಗಿ ನೇಪಾಳದಿಂದ ಕಾರ್ಯನಿರ್ವಹಿಸುತ್ತಿದ್ದ ಇನ್ವೆಸ್ಟ್ ಫ್ರಾಡ್ ಜಾಲವನ್ನು ಭೇದಿಸಿ, ದೇಶದಾದ್ಯಂತ ವಿವಿಧ ರಾಜ್ಯಗಳಲ್ಲಿ ಸೈಬರ್ ಅಪರಾಧ  ಆರೋಪಿಗಳನ್ನು ಯಶಸ್ವಿಯಾಗಿ ಪತ್ತೆ ಹಚ್ಚಲು ಸಹಕರಿಸಿರುತ್ತಾರೆ.  

ಸಾಮಾಜಿಕ ಜಾಲತಾಣಗಳ ಮೇಲೆ ಇಲಾಖೆಯು ನಿರಂತರ ನಿಗಾ ವಹಿಸಿದ್ದು, ದ್ವೇಷ ಭಾಷಣ, ಅಪಪ್ರಚಾರ ಹಾಗೂ ಪ್ರಚೋದನಕಾರಿ ಸಂದೇಶಗಳನ್ನು ಹರಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಪರಿಣಾಮಕಾರಿ ಅಧಿಕಾರಿ/ ಸಿಬ್ಬಂದಿಗಳು ಕ್ರಮ ಕೈಗೊಂಡಿರುತ್ತಾರೆ. 

ಪ್ರಮುಖ ಪ್ರಕರಣಗಳಲ್ಲಿ ತನಿಖಾಧಿಕಾರಿಗಳಾಗಿ, ತನಿಖಾ ಸಹಾಯಕರಾಗಿ ಹಾಗೂ ನ್ಯಾಯಾಲಯದ ಕರ್ತವ್ಯಗಳಲ್ಲಿ ಉತ್ತಮ ಸೇವೆ ಸಲ್ಲಿಸಿ, ಗುಣಮಟ್ಟದ ತನಿಖೆ ನಡೆಸುವ ಮೂಲಕ ಆರೋಪಿಗಳಿಗೆ ನ್ಯಾಯಾಲಯದಲ್ಲಿ ಶಿಕ್ಷೆಯಾಗುವಂತೆ ಶ್ರಮಿಸಿದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನೂ ಈ ಸಂದರ್ಭದಲ್ಲಿ ಗೌರವಿಸಲಾಯಿತು.

ಅದೇ ರೀತಿ, ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ, ವಿವಿಧ ಪ್ರಮುಖ ಬಂದೋಬಸ್ತುಗಳನ್ನು ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಯಶಸ್ವಿಯಾಗಿ ನಿರ್ವಹಿಸುವಲ್ಲಿ ಹಾಗೂ 112 ತುರ್ತು ಸ್ಪಂದನೆ ಸಹಾಯವಾಣಿಯ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆ ಒದಗಿಸುವಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸಿದ ನಗರದ ನಿಸ್ತಂತು ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗೂ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು ಎಂದು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ತಿಳಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ರೈಂ ಕಂಟ್ರೋಲ್ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 29 ಪೊಲೀಸ್ ಅಧಿಕಾರಿಗಳು ಹಾಗೂ 118 ಸಿಬ್ಬಂದಿಗಳಿಗೆ ಕಮಿಷನರ್ ಗೌರವ Rating: 5 Reviewed By: karavali Times
Scroll to Top