ಮಂಗಳೂರು, ಜುಲೈ 07, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಮುಂದುವರಿಯುವ ಮುನ್ಸೂಚನೆ ಇರುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆಗೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 8 ರಂದು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ದರ್ಶನ್ ಎಚ್ ವಿ ಅವರು ಆದೇಶಿಸಿದ್ದಾರೆ. ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ತರಗತಿ ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಇದೇ ವೇಳೆ ಡೀಸಿ ಎಚ್ಚರಿಸಿದ್ದಾರೆ.
7 July 2026
- Blogger Comments
- Facebook Comments
Subscribe to:
Post Comments (Atom)















0 comments:
Post a Comment