ಬಂಟ್ವಾಳ, ಜುಲೈ 06, 2026 (ಕರಾವಳಿ ಟೈಮ್ಸ್) : ಅಟೋ ರಿಕ್ಷಾ ಡಿಕ್ಕಿ ಹೊಡೆದು ಸ್ಕೂಟರ್ ಸವಾರರಿಬ್ಬರು ಗಾಯಗೊಂಡ ಘಟನೆ ವೀರಕಂಭ ಗ್ರಾಮದ ಕೆಲಿಂಜ ಪೆಲತ್ತಡ್ಕ ಎಂಬಲ್ಲಿ ಜೂನ್ 4 ರಂದು ಮಧ್ಯಾಹ್ನ ವೇಳೆ ಸಂಭವಿಸಿದೆ.
ಗಾಯಗೊಂಡ ಸ್ಕೂಟರ್ ಸವಾರರನ್ನು ಡಿ ಅಬೂಬಕ್ಕರ್ ಸಿದ್ದೀಕ್ ಹಾಗೂ ಮಹಮ್ಮದ್ ಶಾಫಿ ಎಂದು ಹೆಸರಿಸಲಾಗಿದೆ. ಜಗದೀಶ್ ಎಂಬವರು ಚಲಾಯಿಸುತ್ತಿದ್ದ ಅಟೋ ರಿಕ್ಷಾ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಅಪಘಾತದಿಂದ ಅಟೋ ಚಾಲಕ ಜಗದೀಶ್ ಹಾಗೂ ಪ್ರಯಾಣಿಕರಾಗಿದ್ದ ಉಷಾ ಎಂಬವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.
ಅಪಘಾತದಿಂದ ಗಾಯಗೊಂಡ ಸ್ಕೂಟರ್ ಸವಾರರನ್ನು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಗೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ ಜೆ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಒಕ್ಕೆತ್ತೂರು ನಿವಾಸಿ ಮಹಮ್ಮದ್ ಅಶ್ರಫ್ ವಿ ಅವರು ನೀಡಿದ ದೂರಿನಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.















0 comments:
Post a Comment