ಧರ್ಮಸ್ಥಳ, ಜುಲೈ 01, 2026 (ಕರಾವಳಿ ಟೈಮ್ಸ್) : ಧರ್ಮಸ್ಥಳ ಠಾಣಾ ಅಪರಾಧ ಕ್ರಮಾಂಕ 169/2016, ಕಲಂ 379, 201 ಐಪಿಸಿ ಪ್ರಕರಣದಲ್ಲಿ ಆರೋಪಿತನಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆಂಧ್ರಪ್ರದೇಶ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಎಂಬಾತನನ್ನು ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವೃಷಭ, ಚರಣ್ ರಾಜ್ ಅವರು ಜೂನ್ 30 ರಂದು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿಂದ ದಸ್ತಗಿರಿ ಮಾಡಿದ್ದಾರೆ. ಈತನನ್ನು ಜುಲೈ 1 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
1 July 2026
- Blogger Comments
- Facebook Comments
Subscribe to:
Post Comments (Atom)















0 comments:
Post a Comment