ಬಂಟ್ವಾಳ, ಜುಲೈ 23, 2026 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 45/2017 ಕಲಂ 379 ಆರ್/ಡಬ್ಲ್ಯು 34 ಐಪಿಸಿ ಪ್ರಕರಣದಲ್ಲಿ ಆರೋಪಿಯಾಗಿ, ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಮಂಗಳೂರು ಕೊಲ್ಲೂರು ನಿವಾಸಿ ವಿಜಯ (32) ಎಂಬಾತನನ್ನು ವಿಟ್ಲ ಪೊಲೀಸರು ಜುಲೈ 23 ರಂದು ಬಂಧಿಸಿದ್ದಾರೆ.
ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಶಿವಾನಂದ ಹಾಗೂ ಯಂಕಪ್ಪ ಅವರುಗಳು ಆರೋಪಿಯನ್ನು ಮಂಗಳೂರಿನಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.











0 comments:
Post a Comment