ಮಂಗಳೂರು, ಆಗಸ್ಟ್ 11, 2026 (ಕರಾವಳಿ ಟೈಮ್ಸ್) : ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಮಿಜಾರ್ ಬಳಿ ಆಗಸ್ಟ್ 11 ರಂದು ಬೆಳಗ್ಗೆ ಸುಮಾರು 6.30ರ ವೇಳೆಗೆ ಬಾಡಿಗೆ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು ಮನೆಯಲ್ಲಿದ್ದ ಆಳ್ವಾಸ್ ಕಾಲೇಜಿನಲ್ಲಿ ವಾಚ್ ಮೆನ್ ಆಗಿ ಕೆಲಸ ಮಾಡಿಕೊಂಡಿರುವ ಶಿವರಾಮ (31) ಅವರ ಪತ್ನಿ ಗಂಗಾ (25) ಹಾಗೂ ಅವರ ಮಗ ಆದರ್ಶ್ (6) ಎಂಬವರಿಗೆ ಸುಟ್ಟ ಗಾಯಗಳಾಗಿರುತ್ತವೆ. ಶಿವರಾಮ ಎಂಬವರಿಗೆ ತೀವ್ರ ತರದ ಸುಟ್ಟ ಗಾಯಗಳಾಗಿರುತ್ತವೆ. ಈ ಬಗ್ಗೆ ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
11 August 2026
- Blogger Comments
- Facebook Comments
Subscribe to:
Post Comments (Atom)












0 comments:
Post a Comment