ಬಂಟ್ವಾಳ, ಆಗಸ್ಟ್ 22, 2026 (ಕರಾವಳಿ ಟೈಮ್ಸ್) : ಸೌತ್ ಕೆನರಾ ಫೆÇೀಟೋಗ್ರಾಫರ್ಸ್ ಎಸೋಸಿಯೇಷನ್ ರಿ. ಬಂಟ್ವಾಳ ವಲಯದ ವತಿಯಿಂದ ಕೈಕಂಬ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾರತ ಸರಕಾರದ ಅಕ್ಷಯ್ ಮಿತ್ರ ಯೋಜನೆಯಡಿಲ್ಲಿನ ಕ್ಷಯರೋಗಿಗೆ ಒಂದು ತಿಂಗಳ ಪೌಷ್ಟಿಕ ಆಹಾರ ಸಾಮಾಗ್ರಿಯನ್ನು ವಿತರಿಸಲಾಯಿತು.
ಈ ಸಂದರ್ಭ ವಲಯದ ಅಧ್ಯಕ್ಷ ರಾಜೇಂದ್ರ ಕೆ, ವೈದ್ಯಾಧಿಕಾರಿ ಡಾ ಅಶ್ವಿನಿ ಬಾಲಕೃಷ್ಣ, ಮಾಜಿ ಅಧ್ಯಕ್ಷರುಗಳಾದ ದಯಾನಂದ್ ಬಂಟ್ವಾಳ್, ಹರೀಶ್ ಕುಂದರ್, ಗೌರವಾಧ್ಯಕ್ಷ ಕಿಶೋರ್ ಕುಮಾರ್, ಕಾರ್ಯದರ್ಶಿ ರವಿ ಕಲ್ಪನೆ, ಕೋಶಾಧಿಕಾರಿ ಕೃಷ್ಣ ರಾಜ್ ರಾವ್, ಸದಸ್ಯರಾದ ವಿಕೇಶ್ ಬಂಟ್ವಾಳ ಹಾಗೂ ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.











0 comments:
Post a Comment