ದೇಶದ ಏಕತೆ, ಸೌಹಾರ್ದತೆ, ಪ್ರಜಾಪ್ರಭುತ್ವದ ಮೌಲ್ಯ ಬಲಪಡಿಸಲು ಕೈ ಜೋಡಿಸಿ : ಮಾಜಿ ಸಚಿವ ರಮಾನಾಥ ರೈ ಕರೆ - Karavali Times ದೇಶದ ಏಕತೆ, ಸೌಹಾರ್ದತೆ, ಪ್ರಜಾಪ್ರಭುತ್ವದ ಮೌಲ್ಯ ಬಲಪಡಿಸಲು ಕೈ ಜೋಡಿಸಿ : ಮಾಜಿ ಸಚಿವ ರಮಾನಾಥ ರೈ ಕರೆ - Karavali Times

728x90

15 August 2026

ದೇಶದ ಏಕತೆ, ಸೌಹಾರ್ದತೆ, ಪ್ರಜಾಪ್ರಭುತ್ವದ ಮೌಲ್ಯ ಬಲಪಡಿಸಲು ಕೈ ಜೋಡಿಸಿ : ಮಾಜಿ ಸಚಿವ ರಮಾನಾಥ ರೈ ಕರೆ

ಬಂಟ್ವಾಳ, ಆಗಸ್ಟ್ 15, 2026 (ಕರಾವಳಿ ಟೈಮ್ಸ್) : ದೇಶದ ಏಕತೆ, ಸೌಹಾರ್ದತೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮಾಜಿ ಸಚಿವ ಬಿ ರಮಾನಾಥ ರೈ ಕರೆ ನೀಡಿದರು. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ನಡೆದ ದೇಶದ 80ನೇ ಸ್ವಾತಂತ್ರ್ಯೋತ್ಸವ ಆಚರಣೆಯಲ್ಲಿ ಧ್ವಜಾರೋಹಣಗೈದು ಸಂದೇಶ ನೀಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿ, ಅವರ ಆದರ್ಶಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು. 

ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ದೇಶದ ಏಕತೆ, ಸೌಹಾರ್ದತೆ, ಪ್ರಜಾಪ್ರಭುತ್ವದ ಮೌಲ್ಯ ಬಲಪಡಿಸಲು ಕೈ ಜೋಡಿಸಿ : ಮಾಜಿ ಸಚಿವ ರಮಾನಾಥ ರೈ ಕರೆ Rating: 5 Reviewed By: karavali Times
Scroll to Top