ಬಂಟ್ವಾಳ, ಆಗಸ್ಟ್ 16, 2026 (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ಕೊಡಂಗೆ ಪಿ ಎಂ ಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಹೈದರ್ ಧ್ವಜಾರೋಹಣಗೈದರು. ವಿದ್ಯಾರ್ಥಿಗಳಿಂದಲೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಭಾಷಣ ನಡೆದವು. ಮುಖ್ಯ ಅತಿಥಿಗಳಾಗಿ ಶಾಲಾ ಸುವರ್ಣ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಪಿ ಎ ರಹೀಂ ಬಿ ಸಿ ರೋಡು, ಅಧ್ಯಕ್ಷ ಲುಕ್ಮಾನ್ ಬಿ ಸಿ ರೋಡು, ಪರ್ಲಿಯಾ ಅರಫಾ ಜುಮಾ ಮಸೀದಿ ಅಧ್ಯಕ್ಷ ಡಿ ಪಿ ಸಿದ್ದೀಕ್ ಹಾಜಿ, ಅಡ್ವಕೇಟ್ ನೌಷದ್ ಅನ್ಸಾರಿ, ಮಿತ್ತಬೈಲು ಮುಹಿಯುದ್ದೀನ್ ಜುಮಾ ಮಸೀದಿ ಸದಸ್ಯ ಶಾಹುಲ್ ಹಮೀದ್ ಎಸ್ ಪಿ, ಪರ್ಲಿಯ ಎಜುಕೇಶನ್ ಟ್ರಸ್ಟ್ ಕಾರ್ಯದರ್ಶಿ ಇಬ್ರಾಹಿಂ ಕೊಡಂಗೆ, ಹುಸೇನ್, ಇಬ್ರಾಹಿಂ ಬೊಗೋಡಿ, ಶಾಲಾ ಎಸ್ ಡಿ ಎಂ ಸಿ ಸದಸ್ಯರಾದ ಹನೀಫ್ ಪರ್ಲಿಯ, ಜಲೀಲ್ ಮೊದಲಾದವರು ಭಾಗವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಸುಗುಣ ಸ್ವಾಗತಿಸಿ, ಲವೀನಾ ವಂದಿಸಿದರು.























0 comments:
Post a Comment